Connect with us

Dvgsuddi Kannada | online news portal | Kannada news online

ನ.11 ರಂದು ಹಗರಿಬೊಮ್ಮನಹಳ್ಳಿ ಬಂದ್

ಜಿಲ್ಲಾ ಸುದ್ದಿ

ನ.11 ರಂದು ಹಗರಿಬೊಮ್ಮನಹಳ್ಳಿ ಬಂದ್

ಡಿವಿಜಿ ಸುದ್ದಿ, ಬಳ್ಳಾರಿ:  ಶಾಸಕ ಭೀಮಾನಾಯ್ಕ್ ಅವರ ಗುಂಡಾವರ್ತನೆ ಖಂಡಿಸಿ ಬಳ್ಳಾರಿ ಜಿಲ್ಲೆಯ ಬಿಜೆಪಿ ಘಟಕದಿಂದ ಹಗರಿಬೊಮ್ಮನಹಳ್ಳಿ ತಾಲ್ಲೂಕ್  ಬಂದ್ ಗೆ  ಕರೆ ನೀಡಲಾಗಿದೆ.

ನವೆಂಬರ್ 11 ರಂದು ಬೆಳಗ್ಗೆ 9 ಗಂಟೆಗೆ ಬೃಹತ್ ಪ್ರತಿಭಟನೆ ನಡೆಸಿ, ಅಂಗಡಿ-ಮುಗ್ಗಟ್ಟುಗಳನ್ನು ಬಂದ್ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗುವುದು ಎಂದು ಹಗರಿಬೊಮ್ಮನಹಳ್ಳಿ ಮಾಜಿ ಬಿಜೆಪಿ ಶಾಸಕ ನೇಮಿರಾಜ್ ನಾಯ್ಕ್ ಹೇಳಿದ್ದಾರೆ.

ಶಾಸಕ ಭೀಮಾನಾಯ್ಕ್ ಅವರು ಪುರಸಭೆ  ಅಧ್ಯಕ್ಷ ಚುನಾವಣೆಯಲ್ಲಿ ಗುಂಡಾ ವರ್ತನೆ ತೋರಿದ್ದು, ಅವರ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿ ವಿರೋಧ ವ್ಯಕ್ತವಾಗಿದೆ. ಹೀಗಾಗಿ ನವೆಂಬರ್ 11 ರಂದು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಬೂತ್ ಮಟ್ಟದ ಅಧ್ಯಕ್ಷರು, ಕಾರ್ಯಕರ್ತರು ಈ ಬಂದ್ ನಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೇಮಿರಾಜ್ ಕರೆ ನೀಡಿದ್ದಾರೆ.

ರೌಡಿಸಂ ಮೂಲಕ ಮೆರೆಯುತ್ತಿರುವ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ದುರ್ವರ್ತನೆ ವಿರುದ್ಧ ಪ್ರತಿಭಟನೆಗೆ ಸಾರ್ವಜನಿಕರು ಸಹ ಸ್ಪಂದಿಸಬೇಕೆಂದು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

 

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

To Top