Connect with us

Dvgsuddi Kannada | online news portal | Kannada news online

ಹೊರನಾಡಿಗೆ ದುಡಿಯಲು‌ ಹೋದ ಹರಪನಹಳ್ಳಿ ಮೂಲದ ಮಹಿಳೆ ಮೇಲೆ ಮರ ಬಿದ್ದು ಸಾವು

ಹರಪನಹಳ್ಳಿ

ಹೊರನಾಡಿಗೆ ದುಡಿಯಲು‌ ಹೋದ ಹರಪನಹಳ್ಳಿ ಮೂಲದ ಮಹಿಳೆ ಮೇಲೆ ಮರ ಬಿದ್ದು ಸಾವು

ಹರಪನಹಳ್ಳಿ: ತಾಲೂಕು ವ್ಯಾಪ್ತಿಯ ಹೊರನಾಡು ಗ್ರಾಮದಲ್ಲಿ ಅಡಿಕೆ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಮರ ಬಿದ್ದು ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ಯುವತಿ ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಪ್ರಿಯಾಂಕಾ (20) ಎಂದು ಗುರುತಿಸಲಾಗಿದ್ದು,ತನ್ನ ಕುಟುಂಬದೊಂದಿಗೆ ಕೂಲಿ ಕೆಲಸ ಅರಸಿ ಹೊರನಾಡು ಗ್ರಾಮಕ್ಕೆ ಬಂದಿದ್ದ ಮಹಿಳೆ, ಸ್ಥಳೀಯ ಅಡಿಕೆ ತೋಟದ ಮಾಲಕರೊಬ್ಬರ ತೋಟದಲ್ಲಿ ಕೆಲಸ ಮಾಡುತ್ತಿದ್ದರು.ಕೂಲಿ ಕೆಲಸಕ್ಕೆ ಬಂದಿದ್ದ ಪ್ರಿಯಾಂಕ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕೆಯ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಮರ ಆಕೆಯ ತಲೆಗೆ ರಭಸವಾಗಿ ತಾಗಿದ ಪರಿಣಾಮ ತೀವ್ರ ಪೆಟ್ಟಾಗಿ ಪ್ರಿಯಾಂಕಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆಂದು ತಿಳಿದು ಬಂದಿದೆ.

ಸ್ಥಳಕ್ಕೆ ಕಳಸ ತಹಶೀಲ್ದಾರ್ ನಂದಕುಮಾರ್, ಪಿಎಸ್ಸೈ ಹರ್ಷವರ್ಧನ್, ಎಎಸ್ ಐ ಮೋಹನ್‍ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

Advertisement

ದಾವಣಗೆರೆ

Advertisement
To Top