Connect with us

Dvgsuddi Kannada | online news portal | Kannada news online

ಹರಪನಹಳ್ಳಿ; ಅಕ್ರಮವಾಗಿ ಸಾಗಿಸುತ್ತಿದ್ದ 240 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಹರಪನಹಳ್ಳಿ

ಹರಪನಹಳ್ಳಿ; ಅಕ್ರಮವಾಗಿ ಸಾಗಿಸುತ್ತಿದ್ದ 240 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಹರಪನಹಳ್ಳಿ: ಅಕ್ರಮವಾಗಿ ಸಾಗಿಸುತ್ತಿದ್ದ 240 ಕ್ವಿಂಟಾಲ್ ಪಡಿತರ ಅಕ್ಕಿ ಲಾರಿಯನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ- ಹೊಸಪೇಟೆ ರಸ್ತೆಯ ನೀಲಗುಂದ ಕ್ರಾಸ್ ಬಳಿ ದಾಳಿ ನಡೆದಿದೆ.

ಮುಂಡರಗಿಯಿಂದ ಹರಪನಹಳ್ಳಿ ಮಾರ್ಗವಾಗಿ ನೀಲಗುಂದ ಗ್ರಾಮಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಅನುಮಾನಸದವಾಗಿ ಅಶೋಕ ಲೈಲ್ಯಾಂಡ್ ಲಾರಿಯಲ್ಲಿ 400 ಚೀಲಗಳಷ್ಟು ಅಕ್ಕಿಯನ್ನು ಸಾಗಿಸಲು ಪ್ರಯತ್ನಿಸಲಾಗುತ್ತಿತ್ತು. ಈ ಬಗ್ಗೆ ಪೋಲಿಸ್‌ರಿಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.

ಅಕ್ಕಿ ತುಂಬಿರುವ ಲಾರಿ ಹಾಗೂ ಚಾಲಕನನ್ನು ಪೋಲಿಸರು ವಶಕ್ಕೆ ಪಡೆದು, ತನಿಖೆ ಕೈಗೊಂಡಿದ್ದು, ಪಟ್ಟಣದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಸಂದರ್ಭದಲ್ಲಿ ಹರಪನಹಳ್ಳಿ ಠಾಣೆ ಪಿಎಸ್‌ಐ ಶಾಂತಮೂರ್ತಿ, ಆಹಾರ ಇಲಾಖೆಯ ಅಧಿಕಾರಿ ಕೊಟ್ರಮ್ಮ, ಆಹಾರ ಇಲಾಖೆ ಸಿಬ್ಬಂದಿ ಹರೀಶ್ ನಾಯ್ಕ್, ಪೋಲೀಸ್ ಇಲಾಖೆ ಅಜ್ಜಪ್ಪ ಇತರರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಹರಪನಹಳ್ಳಿ

Advertisement

ದಾವಣಗೆರೆ

Advertisement
To Top