Connect with us

Dvgsuddi Kannada | online news portal | Kannada news online

ಅಭಿನಂದನ್ ಬಿಡುಗಡೆ ವೇಳೆ ಸೇನಾ ಮುಖ್ಯಸ್ಥರ ಕಾಲುಗಳಲ್ಲಿ ನಡುಕ; ಪಾಕ್ ಸಂಸದ

ಅಂತರಾಷ್ಟ್ರೀಯ ಸುದ್ದಿ

ಅಭಿನಂದನ್ ಬಿಡುಗಡೆ ವೇಳೆ ಸೇನಾ ಮುಖ್ಯಸ್ಥರ ಕಾಲುಗಳಲ್ಲಿ ನಡುಕ; ಪಾಕ್ ಸಂಸದ

ಇಸ್ಲಾಮಬಾದ್:  ಭಾರತ ಫೈಲಟ್ ಅಭಿನಂದನ್ ವರ್ಧಮಾನ್ ಅವರನ್ನು ಬಿಡುಗಡೆ ವೇಳೆ ಪಾಕಿಸ್ತಾನ  ಸೇನಾ ಮುಖ್ಯಸ್ಥರ ಕಾಲುಗಳಲ್ಲಿ ನಡುಕ ಉಂಟಾಗಿತ್ತು ಎಂದು ಪಾಕ್ ಸಂಸದ ಅಯಾಜ್ ಸಾದಿಕ್ ಹೇಳಿದ್ದಾರೆ.

ಈ ಬಗ್ಗೆ ಸಂಸತ್ತಿನಲ್ಲಿ ಮಾತನಾಡಿರುವ ಅವರು, ಪಾಕಿಸ್ತಾನ ಅಭಿನಂದನ್ ಅವರನ್ನು ಬಿಡುಗಡೆ ಮಾಡದಿದ್ದರೆ ಆ ರಾತ್ರಿ 9 ಗಂಟೆ ವೇಳೆಗೆ ಭಾರತ ಪಾಕಿಸ್ತಾನ ಮೇಲೆ ದಾಳಿ ಮಾಡುತ್ತದೆ ಎಂದು ವಿದೇಶಾಂಗ ಸಚಿವ ಖುರೇಷಿ ಹೇಳಿದ್ದರು ಎಂದು ಪಾಕಿಸ್ತಾನ  ಮಾಧ್ಯಮವೊಂದು ವರದಿ ಮಾಡಿದೆ.

ಪ್ರಮುಖ ಸಭೆಯಲ್ಲಿದ್ದ ಸೇನಾ ಮುಖ್ಯಸ್ಥ ಜನಲರ್ ಬಾಜ್ವಾ, ವಿರೋಧಿ ಪಕ್ಷ ನಾಯಕರು, ಸಂಸತ್ ಸದಸ್ಯರು ಸೇರಿದಂತೆ ಎಲ್ಲರೂ ಅಭಿನಂದನ್ ಅವರನ್ನು ಬಿಡುಗಡೆ ಮಾಡಲು ಹೇಳಿದ್ದರು. ಸಭೆಯಲ್ಲಿ ಭಾಗಿಯಾಗಲು ಇಮ್ರಾನ್ ಖಾನ್ ನಿರಾಕರಿಸಿದ್ದರು. ಈ ವೇಳೆ ಸೇನಾ ಮುಖ್ಯಸ್ಥ ಜನಲರ್ ಬಾಜ್ವಾ ಕೋಣೆಗೆ ಬಂದರು. ಅವರ ಕಾಲುಗಳು ನಡುಗುತ್ತಿದ್ದವು, ಅವರು ಬೆವರುತ್ತಿದ್ದರು ಎಂದರು.

ವಿದೇಶಾಂಗ ಸಚಿವರು ದೇವರ ಸಲುವಾಗಿ ಅವರನ್ನು ಬಿಡಲಿ, ಭಾರತ ರಾತ್ರಿ 9 ಗಂಟೆಗೆ ದಾಳಿ ಮಾಡಲಿದೆ ಎಂದಿದ್ದರು ಎಂದು ಸಾದಿಕ್ ಅಂದಿನ ಘಟನೆಯ ಬಗ್ಗೆ ಬಿಚ್ಚಿಟ್ಟಿದ್ದಾರೆ. ಅಲ್ಲದೇ ಮೊದಲು ಅಭಿನಂದನ್ ಸೇರಿದಂತೆ ಎಲ್ಲಾ ವಿಷಯಗಳಲ್ಲಿ ಸರ್ಕಾರದ ಬೆಂಬಲಕ್ಕೆ ನಿಲ್ಲುತ್ತೇವೆ ಎಂದಿದ್ದ ಪ್ರತಿಪಕ್ಷಗಳು ಮತ್ತೆ ಅವರ ಬೆಂಬಲಿಸಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.

2019ರ ಫೆಬ್ರವರಿಯಲ್ಲಿ ಭಾರತ ಮತ್ತು ಪಾಕ್ ವಾಯುಸೇನೆಯ ನಡುವಿನ ನಡೆದ ಹೋರಾಟದ ಸಂದರ್ಭದಲ್ಲಿ ಭಾರತದ ವಾಯುಪ್ರದೇಶವನ್ನು ಅತಿಕ್ರಮಣ ಮಾಡಿದ್ದ ಪಾಕಿಸ್ತಾನದ ಎಫ್-19 ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿತ್ತು. ಈ ವೇಳೆ ವಿಂಗ್ ಕಂಮಾಡರ್ ಆಗಿದ್ದ ವರ್ಧಮಾನ್ ಅವರು ಪಾಕ್ ನೆಲದಲ್ಲಿ ಇಳಿದಿದ್ದರು. ಮಾರ್ಚ್ 1 ರಂದು ಅಭಿನಂದನ್ ಅವರನ್ನು ಪಾಕ್ ಸರ್ಕಾರ ಭಾರತಕ್ಕೆ ಮರಳಿ ಕಳುಹಿಸಿತ್ತು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಅಂತರಾಷ್ಟ್ರೀಯ ಸುದ್ದಿ

To Top