Connect with us

Dvgsuddi Kannada | online news portal | Kannada news online

ಕಾಶ್ಮೀರ ವಶಪಡಿಸಿಕೊಂಡ ನಂತರ ಭಾರತ ವಿರುದ್ಧ ದಾಳಿ: ಶೋಯೆಬ್ ಅಖ್ತರ್

ಅಂತರಾಷ್ಟ್ರೀಯ ಸುದ್ದಿ

ಕಾಶ್ಮೀರ ವಶಪಡಿಸಿಕೊಂಡ ನಂತರ ಭಾರತ ವಿರುದ್ಧ ದಾಳಿ: ಶೋಯೆಬ್ ಅಖ್ತರ್

ನವದೆಹಲಿ : ಕಾಶ್ಮೀರ ವಶಪಡಿಸಿಕೊಂಡ ನಂತರ ಭಾರತದ ಮೇಲೆ ದಾಳಿ ಮಾಡುತ್ತೇವೆ ಎಂದು  ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್​ ಅವರ ಹೇಳಿಕೆಯ ವಿಡಿಯೋ  ವೈರಲ್ ಆಗಿದೆ. ಈ ವಿಡಿಯೋದಲ್ಲಿ ಘಝ್ವಾ ಏ ಹಿಂದ್​ ಪರವಾಗಿ ಬ್ಯಾಟಿಂಗ್ ಮಾಡುತ್ತಿರುವ ಅಖ್ತರ್​, ಮೊದಲು ಕಾಶ್ಮೀರವನ್ನು ವಶಪಡಿಸ್ತೇವೆ. ನಂತರ ಭಾರತದ ಮೇಲೆ ದಾಳಿ ಮಾಡ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

ಸಮಾ ಟಿವಿಗೆ ಸಂದರ್ಶನ ನೀಡಿದ ಅಖ್ತರ್,  ಶಮಲ್ ಮಶ್ರಿಕ್​​ (ಅರೇಬಿಯನ್ ಪೆನಿನ್ಸುಲಾದಿಂದ ಉತ್ತರಕ್ಕೆ ಇರುವ ಪ್ರದೇಶವಾಗಿದ್ದು, ಉರ್ದು ಭಾಷೆಯಲ್ಲಿರುವ ಉಲ್ಲೇಖವಾಗಿದೆ) ನಿಂದ ಸಶಕ್ತ ಸೇನೆ ಉದಯಿಸಲಿದೆ. ಉಜ್ಬೇಕಿಸ್ತಾನ್​ನಿಂದಲೂ ವಿವಿಧ ಶಕ್ತಿಗಳು ನಮ್ಮೊಡನೆ ಕೈ ಜೋಡಿಸಲಿವೆ. ಇವೆಲ್ಲವೂ ಖೊರಾಸಾನ್​ ಅನ್ನು ಉಲ್ಲೇಖಿಸುತ್ತಿದ್ದು, ಐತಿಹಾಸಿಕ ಪ್ರದೇಶ ಲಾಹೋರ್ ತನಕ ವಿಸ್ತರಿಸಲ್ಪಡಲಿದೆ. ನಮ್ಮ ಸೇನೆ ಅಫ್ಘಾನಿಸ್ತಾನದಿಂದ ಅಟಾಕ್​ ತನಕ ತಲುಪಲಿದ್ದು, ಅಟಾಕ್​​ನಲ್ಲಿರುವ ನದಿಯಲ್ಲಿ ಎರಡು ಬಾರಿ ರಕ್ತ ಪ್ರವಾಹವೇ ಹರಿಯಲಿದೆ. ಘಝ್ವಾ ಏ ಹಿಂದ್​ ನಡೆಯಲಿದೆ ಎಂದು ನಮ್ಮ ಗ್ರಂಥಗಳಲ್ಲಿ ಬರೆದಿದೆ.

ಘಝ್ವಾ-ಏ-ಹಿಂದ್ ಪದವನ್ನು ಮೂಲಭೂತವಾದಿ ಇಸ್ಲಾಮಿಕ್ ಧರ್ಮ ಬೋಧಕರು ಪಾಕಿಸ್ತಾನದಲ್ಲಿ ಹೆಚ್ಚಾಗಿ ಬಳಸುತ್ತಿದ್ದಾರೆ. ಇದನ್ನೇ ಪಾಕಿಸ್ತಾನ ಪ್ರಾಯೋಜಿತ ಉಗ್ರ ಸಂಘಟನೆಗಳೂ ಬಳಸುತ್ತಿವೆ. ಈ ಪರಿಕಲ್ಪನೆಯ ಪ್ರಕಾರ, ಸಿರಿಯಾದಿಂದ ಈ ಯುದ್ಧ ಆರಂಭವಾಗಿ ಕಪ್ಪು ಬಾವುಟ ಹಿಡಿದ ಶಕ್ತಿ ಭಾರತವನ್ನು ಅತಿಕ್ರಮಿಸಲಿದೆ. ಇಸ್ಲಾಮಿಕ್ ಸ್ಟೇಟ್​ ಸ್ಥಾಪಿಸುವ ಉದ್ದೇಶದ ಈ ಯುದ್ಧಕ್ಕೆ ಪೂರಕವಾಗಿ ಆಗ ಹಿಂದು ಮತ್ತು ಮುಸಲ್ಮಾನರ ನಡುವೆ ಭೀಕರ ಹೊಡೆದಾಟ ನಡೆಯಲಿದೆ. ಇದರಲ್ಲಿ ಮುಸ್ಲಿಮರಿಗೆ ಭಾರತದಲ್ಲಿರುವ ಹಿಂದುಗಳ ವಿರುದ್ಧ ನಿರ್ಣಾಯಕ ಗೆಲುವು ಸಿಗಲಿದೆ. ಭಾರತದಲ್ಲಿ ಉಗ್ರಕೃತ್ಯಗಳಿಗೆ ಉಗ್ರರನ್ನು ನಿಯೋಜಿಸುವಾಗ ಜೈಷ್​ ಏ ಮೊಹಮ್ಮದ್ (ಜೆಇಎಂ) ನಿರಂತರವಾಗಿ ಇದನ್ನೇ ಬೋಧಿಸಿ, ಅವರನ್ನು ಪ್ರಚೋದಿಸುತ್ತಿದೆ ಎಂದಿದ್ದಾರೆ .

ಅಖ್ತರ್​ಗೆ  ಈ ಹೇಳಿಕೆಗೆ ವ್ಯಾಪಕ ವಿವಾದ ಸೃಷ್ಟಿಸಿದೆ. ಪರ – ವಿರೋಧದ ಟೀಕೆಗಳು ವ್ಯಕ್ತವಾಗಿವೆ. ಘಝ್ವಾ ಏ ಹಿಂದ್ ಅಂದರೆ ಭಾರತದ ವಿರುದ್ಧ ಧರ್ಮಯುದ್ಧ ಎಂದು ಅರ್ಥ ಬರುತ್ತದೆ.

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಅಂತರಾಷ್ಟ್ರೀಯ ಸುದ್ದಿ

To Top