Connect with us

Dvgsuddi Kannada | online news portal | Kannada news online

ನೂತನ ಐಟಿ-ಬಿಟಿ  ನೀತಿ ಬಿಡುಗಡೆ: ಎರಡು, ಮೂರನೇ ಹಂತದ ನಗರಗಳಲ್ಲಿ ಐಟಿ-ಬಿಟಿ ಕೇಂದ್ರ..!

ಪ್ರಮುಖ ಸುದ್ದಿ

ನೂತನ ಐಟಿ-ಬಿಟಿ  ನೀತಿ ಬಿಡುಗಡೆ: ಎರಡು, ಮೂರನೇ ಹಂತದ ನಗರಗಳಲ್ಲಿ ಐಟಿ-ಬಿಟಿ ಕೇಂದ್ರ..!

 ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಐಟಿ-ಬಿಟಿ ಕೇಂದ್ರ ತೆರೆಯಲು ಸರ್ಕಾರ ಆದ್ಯತೆ ನೀಡಲಿದೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ  ಆಯೋಜಸಿರುವ ಟೆಕ್ ಸಮಿಟ್- 2020 ಹಿನ್ನೆಲೆಯಲ್ಲಿ ನೂತನ ಐಟಿ-ಬಿಟಿ ನೀತಿಯನ್ನು ರಾಜ್ಯ ಸರ್ಕಾರ ಇಂದು ಬಿಡುಗಡೆ ಮಾಡಿದ್ದು ಯಶಸ್ಸಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು. ರಾಜ್ಯದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ನಗರಗಳಲ್ಲಿ ಪರಿಸರ ಸ್ನೇಹಿ ತಂತ್ರಜ್ಞಾನ ಅಳವಡಿಕೆ ಜೊತೆಗೆ ಬಂಡವಾಳ ಆಕರ್ಷಣೆಗೂ ಆದ್ಯತೆ ನೀಡಲಾಗುವುದು ಎಂದರು.

ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿನ ಬೆಳವಣಿಗೆಗಳ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಿ, ಸಮಸ್ಯೆಗಳಿಗೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ಕಾರ್ಯ ಯೋಜನೆಯನ್ನು ಸಿದ್ಧಪಡಿಸಲಿದೆ., ಮುಂದಿನ 5 ವರ್ಷಗಳಲ್ಲಿ ರಾಜ್ಯದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಯನ್ನು 300 ಶತಕೋಟಿ ಡಾಲರ್ ಗೆ ಏರಿಸುವ ಗುರಿ ಹೊಂದಲಾಗಿದೆ. ಇನ್ನು 2025 ವೇಳೆ 60 ಲಕ್ಷ ಪ್ರತ್ಯೇಕ್ಷ ಮತ್ತು ಪರೋಕ್ಷ ಉದ್ಯೋಗ ಸೃಷ್ಠಿಗೆ ಯೋಜನೆ ರೂಪಿಸಲಾಗಿದೆ.

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});