Connect with us

Dvgsuddi Kannada | online news portal | Kannada news online

ಬೆಂಗಳೂರು ಟೆಕ್ ಸಮಿಟ್ ಗೆ ಸಿಎಂ ಯಡಿಯೂರಪ್ಪ ಚಾಲನೆ

ಪ್ರಮುಖ ಸುದ್ದಿ

ಬೆಂಗಳೂರು ಟೆಕ್ ಸಮಿಟ್ ಗೆ ಸಿಎಂ ಯಡಿಯೂರಪ್ಪ ಚಾಲನೆ

ಬೆಂಗಳೂರು: ತಂತ್ರಜ್ಞಾನ ಮೇಳ ‘ಬೆಂಗಳೂರು ಟೆಕ್ ಸಮಿಟ್-2020’ ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು. ಸಿಎಂಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಸಚಿವ ಜಗದೀಶ್ ಶೆಟ್ಟರ್ ಸಾಥ್ ನೀಡಿದರು. .

ಇಂದಿನಿಂದ ನ. 21ರ ವರೆಗೆ ನಡೆಯುವ ಶೃಂಗದಲ್ಲಿ 20 ಸಾವಿರಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ ಇದ್ದು , 250 ಪ್ರದರ್ಶಕರು ಭಾಗವಹಿಸಲಿದ್ದಾರೆ. ಆರೋಗ್ಯ, ಕೃಷಿ, ವಿಪತ್ತು ನಿರ್ವಹಣೆಗೆ ಡ್ರೋಣ್‌ ಮತ್ತು ರೋಬೊಟಿಕ್‌ಗಳ ಮೂಲಕ ಪರಿಹಾರ, ಡಿಜಿಟಲ್‌ ಹೆಲ್ತ್‌ ಕೇರ್‌, ಸಾರ್ವಜನಿಕ ಸಾರಿಗೆಯಲ್ಲಿ ತಂತ್ರಜ್ಞಾನ, ಕೃಷಿ ಉದ್ಯಮ, ಸೈಬರ್‌ ಸೆಕ್ಯುರಿಟಿ, ಉಪಗ್ರಹ ಮತ್ತು ಸಮಾಜ ಸೇರಿದಂತೆ 70ಕ್ಕೂ ಅಧಿಕ ಗೋಷ್ಠಿಗಳು ನಡೆಯಲಿವೆ.

ನೆಕ್ಸ್ಟ್ ಈಸ್‌ ನೌ  ಶೀರ್ಷಿಕೆ ಅಡಿ ಭವಿಷ್ಯವನ್ನು ಈಗಲೇ ಕಂಡುಕೊಳ್ಳುವ ಪ್ರಯತ್ನ ಈ ಮೇಳದಲ್ಲಿ ನಡೆಯಲಿದೆ. ಮೇಳದಲ್ಲಿ  25ಕ್ಕೂ ಹೆಚ್ಚು ದೇಶಗಳಪ್ರತಿನಿಧಿಗಳು,ವಿವಿಧ ದೇಶಗಳ ರಾಯಭಾರಿಗಳು ಭೌತಿಕವಾಗಿ ಹಾಗೂ ಕೆಲವರು ವರ್ಚುವಲ್‌ ಆಗಿ ಪಾಲ್ಗೊಳ್ಳಲಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top