ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಕ್ರಮವಾಗಿ ನೇಮಕವಾಗಿದ್ದ 11 ಪ್ರೌಢಶಾಲೆ ಶಿಕ್ಷಕರ ಬಂಧಿಸಿದ ಸಿಐಡಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: 2014-15ನೇ ಸಾಲಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಪ್ರೌಢ ಶಾಲೆಗಳ ಗ್ರೇಡ್‌ 2 ಸಹ ಶಿಕ್ಷಕರು ಮತ್ತು ಗ್ರೇಡ್‌-1ರ ದೈಹಿಕ ಶಿಕ್ಷಕರ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ತುಮಕೂರು ಮತ್ತು ವಿಜಯಪುರ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 11 ಶಾಲಾ ಶಿಕ್ಷಕರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

 

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನ ಕಣಿವೆ ಗ್ರಾಮದ ಶಾಲೆಯ ಶಮೀನಾಜ್‌ ಬಾನು (34), ಕುಣಿಗಲ್‌ ತಾಲೂಕಿನ ಕೊಡವತ್ತಿ ಗ್ರಾಮದ ಶಾಲೆಯ ರಾಜೇಶ್ವರಿ ಜಗ್ಲಿ (35), ತಿಪಟೂರು ತಾಲೂಕಿನ ಆಲ್ಬೂರ್‌ ಗ್ರಾಮದ ಶಾಲೆಯ ಕಮಲಾ(35), ಕುಣಿಗಲ್‌ ತಾಲೂಕಿನ ನಾಗಸಂದ್ರ ಗ್ರಾಮದ ಶಾಲೆಯ ನಾಗರತ್ನ(42), ತುರುವೇಕೆರೆ ತಾಲೂಕಿನ ಹುಲಿಕಲ್‌ ಗ್ರಾಮ ಶಾಲೆಯ ಎಚ್‌.ದಿನೇಶ್‌(38), ಚಿಕ್ಕನಾಯಕನಹಳ್ಳಿ ತಾಲೂಕಿನ ಕಮ್ಲಾಪುರ ಗ್ರಾಮದ ಶಾಲೆಯ ನವೀನ್‌ ಹನುಮೇಗೌಡ(35), ಕುಣಿಗಲ್‌ ತಾಲೂಕಿನ ಅಮೃತೂರು ಗ್ರಾಮದ ಶಾಲೆಯ ನವೀನ್‌ ಕುಮಾರ್‌(38), ಗುಬ್ಬಿ ತಾಲೂಕಿನ ಕೆ.ಮತ್ತಿಘಟ್ಟ ಶಾಲೆಯ ಎಸ್‌. ದೇವೇಂದ್ರ ನಾಯಕ್‌, ಕುಣಿಗಲ್‌ ತಾಲೂಕಿನ ಹೊಳಗೇರಿ ಗ್ರಾಮ ಶಾಲೆಯ ಆರ್‌.ಹರೀಶ್‌(37), ತುರುವೇಕೆರೆ ತಾಲೂಕಿನ ಬಿ.ಎಂ.ಪ್ರಸನ್ನ(42) ಮತ್ತು ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದ ಮಹೇಶ್‌ ಶ್ರೀಮಂತ ಸೂಸಲಾಡಿ(38) ಎಂಬುವರನ್ನು ಬಂಧಿಸಲಾಗಿದೆ. ಮತ್ತೂಬ್ಬ ಆರೋಪಿಗಾಗಿ ಶೋಧ ನಡೆಯುತ್ತಿದೆ.

2013-14 ಮತ್ತು 2014-15 ಸಾಲಿನಲ್ಲಿ ನಡೆದ ಸರ್ಕಾರಿ ಪ್ರೌಢ ಶಾಲೆಗಳ ಗ್ರೇಡ್‌ 2 ಸಹ ಶಿಕ್ಷಕರು ಮತ್ತು ಗ್ರೇಡ್‌-1ರ ದೈಹಿಕ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮವಾಗಿ ನೇಮಕವಾಗಿದ್ದಾರೆ. ಈ ಸಂಬಂಧ ಇತ್ತೀಚೆಗೆ ರಾಜ್ಯ ಸರ್ಕಾರದ ಅಕ್ರಮ ನೇಮಕಾತಿಗೊಂಡಿರುವ ಸಹ ಶಿಕ್ಷಕರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಸಿಐಡಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಇತ್ತೀಚೆಗಷ್ಟೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ನಡೆದಿದ್ದ ಶಿಕ್ಷಕರ ನೇಮಕಾತಿ ಪ್ರಕರಣದ ತನಿಖೆಗೆ ಸಿಐಡಿಗೆ ವಹಿಸಲಾಗಿತ್ತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *