ಬೆಂಗಳೂರು: ಕ್ರೀಡಾಪಟುಗಳನ್ನು ತಯಾರು ಮಾಡಲು ಸರ್ಕಾರ ಯೋಜನೆ ರೂಪಿಸಿದ್ದು, ತೆಗೆದುಕೊಂಡಿದೆ. 1666 ದೈಹಿಕ ಶಿಕ್ಷಕರಿಗೆ ಗುಣಮಟ್ಟದ ವೈಜ್ಞಾನಿಕ ತರಬೇತಿ ನೀಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣ ಗೌಡ ತಿಳಿಸಿದರು.
ಸಚಿವರ ನೇತೃತ್ವದಲ್ಲಿ ವಿಕಾಸ ಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಸರ್ಕಾರ ಈಗಾಗಲೇ ವಿವಿಧ ಯೋಜನೆ ಜಾರಿಗೆ ತಂದಿದ್ದು, ತಳಮಟ್ಟದಿಂದ ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ ನೀಡಲು ದೈಹಿಕ ಶಿಕ್ಷರಿಗೇ ಕ್ರೀಡಾ ಇಲಾಖೆಯಿಂದ ವೈಜ್ಞಾನಿಕ ತರಬೇತಿ ನೀಡಲು ತೀರ್ಮಾನಿಸಲಾಗಿದೆ.
ಶಿಕ್ಷಣ ಇಲಾಖೆಯಿಂದ ಈಗಾಗಲೇ 1666 ದೈಹಿಕ ಶಿಕ್ಷಕರ ಪಟ್ಟಿ ಪಡೆಯಲಾಗಿದ್ದು, ತಿಂಗಳಾಂತ್ಯದಲ್ಲಿ ಕ್ರೀಡಾ ಇಲಾಖೆಯಿಂದ ತರಬೇತಿ ನೀಡಲು ಆರಂಭಿಸಲಾಗುವುದು ಎಂದರು.



