Connect with us

Dvgsuddi Kannada | online news portal | Kannada news online

ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡಿದರೆ ಶಿಸ್ತು ಕ್ರಮ: ನಳಿನ್‌ ಕುಮಾರ್ ಕಟೀಲ್

ಪ್ರಮುಖ ಸುದ್ದಿ

ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡಿದರೆ ಶಿಸ್ತು ಕ್ರಮ: ನಳಿನ್‌ ಕುಮಾರ್ ಕಟೀಲ್

ದಾವಣಗೆರೆ: ಸಮಸ್ಯೆ ಏನೇ ಇದ್ದರೂ ಸಿಎಂ ಬಳಿ ಚರ್ಚೆ ಮಾಡಬೇಕು, ಇಲ್ಲವೇ ನನ್ನ ಬಳಿ ಚರ್ಚೆ ಮಾಡಬೇಕು. ಅದನ್ನು  ಬಿಟ್ಟು  ಹೊರಗಡೆ ಮಾತನಾಡಿದರೆ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಬಿಜೆಪಿ ರಾಜಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಯತ್ನಾಳ್  ಅವರಿಗೆ ಸಂಬಂಧಿಸಿದಂತೆ ಏನೆಲ್ಲಾ ಬೆಳವಣಿಗೆ ಯಾಗಿದೆ ಎಂಬುದನ್ನು ರಾಷ್ಟ್ರೀಯ ಶಿಸ್ತು ಸಮಿತಿಗೆ ಮಾಹಿತಿ ನೀಡಿದ್ದೇವೆ.  ರಾಷ್ಟ್ರೀಯ ಸಮಿತಿ ಅವರ ಮೇಲೆ ಕ್ರಮ ಕೈಗೊಳ್ಳಲಿದೆ.

ಸಚಿವರುಗಳು ಶಾಸಕರಿಗೆ ಸಹಕಾರ ನೀಡುತ್ತಿಲ್ಲ ಎಂಬುದಕ್ಕೆ ಸಿಎಂ ಯಡಿಯೂರಪ್ಪ  ಶಾಸಕರ ಜೊತೆ ಸಭೆ ನಡೆಸಿದ್ದಾರೆ.  ಪಕ್ಷದ ಹಾಗೂ ಸಿಎಂ ವಿರುದ್ಧ ಅಸಮಾಧಾನ ವಿಲ್ಲ.ಕೆಲ ಶಾಸಕರು ಅನುದಾನವನ್ನು ಕೇಳಿದ್ದಾರೆ. ಅವರಿಗೆ ಸಿಎಂ ಯಡಿಯೂರಪ್ಪ  ಅವರು ಕೋವಿಡ್ ಸಂದರ್ಭದ ಬಗ್ಗೆ ವಿವರಿಸಿದ್ದಾರೆ ಎಂದು ತಿಳಿಸಿದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});