ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: 12 ಲಕ್ಷ ಹಸು ,ಎಮ್ಮೆ ವಿಮೆ ಭದ್ರತೆ ನೀಡಲು ಕೆಎಂಎಫ್ ನಿರ್ಧಾರ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಳಗಾವಿ : ಹಾಲು ಉತ್ಪಾದಕರಿಗೆ ಕರ್ನಾಟಕ ಹಾಲು ಮಹಾ ಮಂಡಳಿ (ಕೆಎಂಎಫ್ ) ಗುಡ್ ನ್ಯೂಸ್ ನೀಡಿದ್ದು, ರಾಜ್ಯದಲ್ಲಿ 12 ಲಕ್ಷ ಹಸು, ಎಮ್ಮೆಗಳಿಗೆ ವಿಮೆ ಭದ್ರತೆ ಒದಗಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದಲ್ಲಿ ಮಾತನಾಡಿದ ಬಾಲಚಂದ್ರಜಾರಕಿಹೊಳಿ, ವಿಮೆ ಭದ್ರತೆ ಯೋಜನೆಯಡಿ ಹಸು ಅಥವಾ ಎಮ್ಮೆ ಮೃತಪಟ್ಟರೆ ಅದರ ಮಾಲೀಕರಿಗೆ 40 ರಿಂದ 50 ಸಾವಿರ ರೂ. ಸಿಗಲಿದೆ ಎಂದರು.

 

ರಾಜ್ಯದಲ್ಲಿರುವ 14 ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಮೂಲಕ 1,000 ಜನರಿಗೆ ಉದ್ಯೋಗ ನೀಡಲಾಗುವುದು. ಕೆಎಂಎಫ್ ವಾರ್ಷಿಕ ವಹಿವಾಟು 15 ಸಾವಿರ ಕೋಟಿ ಇದೆ. ಇದನ್ನು ಮುಂದಿನ 4 ವರ್ಷಗಳ ಅವಧಿಯಲ್ಲಿ 25 ಸಾವಿರ ಕೋಟಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *