Connect with us

Dvgsuddi Kannada | online news portal | Kannada news online

ಸಾರಿಗೆ ನೌಕರರ ಮುಷ್ಕರ: ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಯಲ್ಲಿ ಬಂಧನ

ಪ್ರಮುಖ ಸುದ್ದಿ

ಸಾರಿಗೆ ನೌಕರರ ಮುಷ್ಕರ: ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಯಲ್ಲಿ ಬಂಧನ

ಬೆಳಗಾವಿ: ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲವಾಗಿ ನಿಂತಿದ್ದ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಳಗಾವಿ ಪೊಲೀಸರು ಖಾಸಗಿ ಹೋಟೆಲ್ ನಲ್ಲಿ ಬಂಧಿಸಿದ್ದಾರೆ.

6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಮುಷ್ಕರ ಇನ್ನಷ್ಟು ತೀವ್ರಗೊಳಿಸಲು ಸಿದ್ಧತೆ ನಡೆಸುತ್ತಿದ್ದ  ಕೋಡಿಹಳ್ಳಿ ಚಂದ್ರಶೇಖರ್, ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸುತ್ತಿದ್ದ ವೇಳೆ ಬಂಧಿಸಲಾಗಿದೆ.

ಖಾಸಗಿ ಹೋಟೆಲ್ ನಲ್ಲಿ ಸಾರಿಗೆ ನೌಕರರು ಹಾಗೂ ಸಿಬ್ಬಂದಿಗಳ ಜೊತೆ ಸಭೆ ನಡೆಸುತ್ತಿದ್ದರು. ಈ ವೇಳೆ ಸಭೆ ನಡೆಸುವ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೋಡಿಹಳ್ಳಿಯನ್ನು ವಶಕ್ಕೆ ಪಡೆದು ಕರೆದುಕೊಂಡು ಹೋದರು. ಈ ವೇಳೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಬಂಧನ ಅಕ್ರಮ, ದಮನೀಯ ನೀತಿ ಆಗುತ್ತದೆ. ಇದು ಪ್ರಜಾಪ್ರಭುತ್ವದ ವಾಕ್ ಸ್ವಾತಂತ್ರ್ಯಕ್ಕೆ ದಕ್ಕೆಯಾಗಿದೆ. ಚಳವಳಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ.  ಆದರೆ, ಬಂಧನವನ್ನು ನಾವು ಸ್ವಾಗತಿಸುತ್ತೇವೆ. ಮುಂದಿನ ದಿನಗಳಲ್ಲಿ ಏನು ಕ್ರಮ ಕೈಗೊಳ್ಳುತ್ತಾರೋ ಕಾದು ನೋಡುತ್ತೇವೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top