BREAKING NEWS : ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟ, ನನ್ನ ಸಂಪರ್ಕದಲ್ಲಿ 40 ಶಾಕರಿದ್ದಾರೆ ಎಂದ  ರೇಣುಕಾಚಾರ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು : ಸಿಎಂ ಯಡಿಯೂರಪ್ಪ ನೇತೃತ್ವದ ಸಂಪುಟ ಪುನರ್ ರಚನೆ, ಸಂಪುಟ ವಿಸ್ತರಣೆ ವಿದ್ಯಾಮಾನ ನಡುವೆಯೇ, ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ.  ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ನನ್ನ ಸಂಪರ್ಕದಲ್ಲಿ 40 ಶಾಸಕರಿದ್ದಾರೆ. ಅವರೊಂದಿಗೆ ಸಭೆ ನಡೆಸುವುದಾಗಿ ಹೊಸ ಬಾಂಬ್ ಸಿಡಿಸಿದ್ದಾರೆ.

40 ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಸದ್ಯದಲ್ಲೇ ನಾವು ಕೂಡ ಸಭೆ ಸೇರುತ್ತೇವೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಎದುರು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ ಎಂದು ಗೊತ್ತಾಗಿದೆ. ಸಚಿವ ಸ್ಥಾನ ಬಿಡಲು ಕೆಲ ಸಚಿವರು ಒಪ್ಪುತ್ತಿಲ್ಲ ಎಂದು ಕಟೀಲ್ ಎದುರು ಅಸಮಾಧಾನ ತೋಡಿಕೊಂಡಿದ್ದಾರೆ.

renukacharya bl santhosh

ಸಿಎಂ ಮೇಲೆ ಒತ್ತಡ ಹೇರಲು ಕೆಲವರಿಂದ ಸಭೆ ನಡೆಸಲಾಗುತ್ತದೆ ಎಂದ ರೇಣುಕಾಚಾರ್ಯಗೆ ನಳೀನ್ ಕುಮಾರ್ ಕಟೀಲ್ ಅವರು, ಸಭೆ ನಡೆಸುವುದು ಬೇಡ. ನೀವು ಸಿಎಂ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ.  ನಾನು  ಸಿಎಂ ಜೊತೆ ಚರ್ಚಿಸುವೆ ಎಂಬುದಾಗಿ ರೇಣುಕಾಚಾರ್ಯ ಅವರನ್ನು ಸಮಾಧಾನ ಪಡಿಸಿದ್ದಾರೆ.  ಈ ಮೂಲಕ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ, ಪುನರ್ ರಚನೆ ಮುನ್ನವೇ ಅಸಮಾಧಾನ ಎದ್ದಿದೆ. ಈ ಬಾರಿ ಸಚಿವ ಸ್ಥಾನ ಪಡೆಯಲೇ ಬೇಕು ಎಂಬ ಜಿದ್ದಿಗೆ  ರೇಣುಕಾಚಾರ್ಯ  ಬಿದ್ದಂತೆ ಕಾಣುತ್ತಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *