Connect with us

Dvgsuddi Kannada | online news portal | Kannada news online

ನಾನು ಮಧ್ಯರಾತ್ರಿ ಸಿಎಂ ಭೇಟಿ ಮಾಡಿದ್ದು ಸಾಬೀತುಪಡಿಸಿದರೆ, ರಾಜಕೀಯ ನಿವೃತ್ತಿ: ಡಿ.ಕೆ. ಶಿವಕುಮಾರ್

ರಾಜಕೀಯ

ನಾನು ಮಧ್ಯರಾತ್ರಿ ಸಿಎಂ ಭೇಟಿ ಮಾಡಿದ್ದು ಸಾಬೀತುಪಡಿಸಿದರೆ, ರಾಜಕೀಯ ನಿವೃತ್ತಿ: ಡಿ.ಕೆ. ಶಿವಕುಮಾರ್

 ಬೆಂಗಳೂರು: ಮಧ್ಯರಾತ್ರಿ ವೇಳೆ ನಾನು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಪುಟ ಸಹೋದ್ಯೋಗಿಗಳನ್ನು ಭೇಟಿ ಮಾಡಿಲ್ಲ.  ನಾನು ಭೇಟಿ ಮಾಡಿದ್ದನ್ನು ಸಾಬೀತು ಪಡಿಸಿದಲ್ಲಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿಗೆ ತಿರುಗೇಟು ನೀಡಿದರು. ನೀಚ ರಾಜಕಾರಣ ನನ್ನ ರಕ್ತದಲ್ಲಿಯೇ ಇಲ್ಲ. ನಿಮಗೆ ಪೊಲಿಟಿಕಲ್ ಪ್ರಾಬ್ಲಂ ಇರಬಹುದು, ನನಗೆ ಯಾವುದೇ ಪೊಲಿಟಿಕಲ್ ಪ್ರಾಬ್ಲಂ ಇಲ್ಲ ಎಂದು ಎಚ್​ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಭಾರತ್​ ಬಂದ್ ವೇಳೆ ಹಸಿರು ಶಾಲು ಧರಿಸಿ ರೈತರ ಪರವಾಗಿ ಫ್ರೀಡಂ ಪಾರ್ಕ್​ವರೆಗೆ ಮೆರವಣಿಗೆ ಹೋಗುವ ಮೂಲಕ ರೈತರಿಗೆ ಬೆಂಬಲ ನೀಡಿದ್ದೆವು. ನಾವು ಹಸಿರು ಶಾಲು ಹಾಕಿಕೊಂಡು ಹೋಗಿದ್ದಕ್ಕೆ ಕುಮಾರಸ್ವಾಮಿ ಟೀಕಿಸಿದ್ದಾರೆ. ಕಾಂಗ್ರೆಸ್ ಶಾಲಿಗೆ ಶಕ್ತಿ ಹೋಗಿದೆ. ಬೆಲೆ ಇಲ್ಲ, ಅದಕ್ಕೆ ಹಸಿರು ಶಾಲು ಧರಿಸಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಕೆಪಿಸಿಸಿ ಅಧ್ಯಕ್ಷನಾಗಿ ಇಂತಹ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ಈ ಶಾಲು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದೆ. ಪ್ರಧಾನಮಂತ್ರಿ, ಮುಖ್ಯಮಂತ್ರಿಗಳನ್ನು ಸೃಷ್ಟಿಸಿದೆ ಎಂದು ಎಚ್​ಡಿಕೆ ತಿರುಗೇಟು ನೀಡಿದರು.

ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಇಬ್ಬರೂ ಒಂದೇ ವಿಮಾನದಲ್ಲಿ ವಿಮಾನ ಪ್ರಯಾಣ ಮಾಡಿದ್ದೆವು. ವಿಮಾನದಲ್ಲಿ ಪ್ರಯಾಣಿಸಿದಾಗ ಕುಶಲೋಪರಿ ಸಹಜ. ಆದರೆ, ಆಗಲೂ ಅದಕ್ಕೆ ಬೇರೆ ಬಣ್ಣ ಕಟ್ಟಲಾಗಿತ್ತು. ಕದ್ದುಮುಚ್ಚಿ ರಾಜಕೀಯ ಮಾಡುವ ನೀಚ ರಾಜಕಾರಣ ನನ್ನ ರಕ್ತದಲ್ಲಿಲ್ಲ ಎಂದ ಡಿಕೆಶಿ, ಮಧ್ಯರಾತ್ರಿ ಹೋಗಿ‌ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ್ದಾರೆ ಎಂದು ಎಚ್​​ಡಿಕೆ ಆರೋಪ ಮಾಡಿದ್ದಾರೆ. ಈ ರೀತಿ ಆರೋಪ ಮಾಡುವುದು ಸರಿಯಲ್ಲ. ಯಡಿಯೂರಪ್ಪ ಅಥವಾ ಯಾವುದೇ ಸಚಿವರನ್ನು ಮಧ್ಯರಾತ್ರಿ ಭೇಟಿ ಮಾಡಿ ಕೆಲಸ ಮಾಡಿಸಿಕೊಂಡಿದ್ದನ್ನು ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುವೆ ಎಂದರು.

ಕಾಂಗ್ರೆಸ್​ ತರಹ ನಾವು ಡಬಲ್ ಗೇಮ್ ರಾಜಕೀಯ ಮಾಡಲ್ಲ. ಈಗ ಕಾಂಗ್ರೆಸ್ ಶಾಲಿಗೂ ಬೆಲೆಯಿಲ್ಲ, ಹಾಗಾಗಿ ಹಸಿರು ಶಾಲು ಹಾಕಿಕೊಂಡು ಹೋಗಿದ್ದಾರೆ. ರೈತರನ್ನು ಉಳಿಸಿಕೊಳ್ಳಲು ನಮ್ಮ ಪಕ್ಷದಿಂದ ಬಳುವಳಿ ಕೊಟ್ಟಿದ್ದೇವೆ. ಹೋರಾಟ ಮಾಡೋದ್ರಿಂದ ಎಲ್ಲ ಸಮಸ್ಯೆ ಬಗೆಹರಿಯಲ್ಲ, ನಾನು ಬಿಜೆಪಿಗೆ ಹತ್ತಿರವಾಗಿಲ್ಲ, ಸಾಫ್ಟ್ ಕಾರ್ನರ್ ಇಟ್ಟುಕೊಂಡಿಲ್ಲ ಎಂದಿದ್ದರು. ನಾನು ಹಗಲು ವೇಳೆ ಸಿಎಂ ಯಡಿಯೂರಪ್ಪರನ್ನ ಭೇಟಿ ಮಾಡಿದ್ದೆ. ಆದ್ರೆ ಕಾಂಗ್ರೆಸ್​ನಂತೆ ರಾತ್ರಿ ವೇಳೆ ಹೋಗಿಲ್ಲ ಎಂದು ಟೀಕಿಸಿದ್ದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top
(adsbygoogle = window.adsbygoogle || []).push({});