Connect with us

Dvgsuddi Kannada | online news portal | Kannada news online

50 ಗ್ರಾಮ ಪಂಚಾಯ್ತಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ

n6252685841722953692828119f3868bb4656bc1536abf51441f8baedf5ccd9da3f82c4222c9a729f26370c

ಪ್ರಮುಖ ಸುದ್ದಿ

50 ಗ್ರಾಮ ಪಂಚಾಯ್ತಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ

ಬೆಳಗಾವಿ: ರಾಜ್ಯದ 50 ಗ್ರಾಮ ಪಂಚಾಯ್ತಿಗಳನ್ನು ಪಟ್ಟಣ ಪಂಚಾಯ್ತಿ, ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇದ್ದು, ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್‌‍.ಸುರೇಶ್‌ ತಿಳಿಸಿದರು.

ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ದಿನಕರ್ ಶೆಟ್ಟಿ ಕೇಳಿದ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಮ್ ಖಾನ್ ಉತ್ತರ ನೀಡುತ್ತಿದ್ದ ವೇಳೆ ಮಾತನಾಡುದ ಅವರು, 2011ರ ಜನಗಣತಿ ಪ್ರಕಾರ ಗ್ರಾಮ ಪಂಚಾಯತಿ ಮೇಲ್ದರ್ಜೆಗೇರಿಸಲು ಅವಕಾಶವಿಲ್ಲ. ಆದರೆ ಗೋಕರ್ಣಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಗೋಕರ್ಣದ ಬಗ್ಗೆ ನಮಗೂ ವಿಶೇಷವಾದ ಪ್ರೀತಿ ಇದೆ. ಆದರೆ, ರಾಜ್ಯದಲ್ಲಿ ಗ್ರಾ.ಪಂ.ಯನ್ನು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿಸಲು ರಾಜ್ಯಾದ್ಯಂತ ಒಂದೇ ಮಾನದಂಡವಿದೆ ಎಂದು ವಿವರಿಸಿದರು.

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಗ್ರಾ.ಪಂ.ಅನ್ನು ಪಟ್ಟಣ ಪಂಚಾಯ್ತಿಯನ್ನಾಗಿ ಮೊದಲ ಆದ್ಯತೆಯಲ್ಲೇ ಮೇಲ್ದದರ್ಜೆ ಗೇರಿಸಲು ಗಮನ ಕೊಡಲಾಗುವುದು. 2011ರ ಜನಗಣತಿಯ ಪ್ರಕಾರ ಗೋಕರ್ಣ ಜನಸಂಖ್ಯೆ 13,539 ಜನಸಂಖ್ಯೆ ಇದೆ. 2015ರ ಮಾರ್ಚ್ 19ರ ಸಚಿವ ಸಂಪುಟದಲ್ಲಿ 15ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ಅರ್ಹ ಗ್ರಾ.ಪಂ.ಗಳನ್ನು ಮಾತ್ರ ಪಟ್ಟಣ ಪಂಚಾಯ್ತಿಯನ್ನಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. ಗೋಕರ್ಣ ಗ್ರಾಪಂ ನಿಗದಿತ ಮಾನದಂಡವನ್ನು ಪೂರೈಸುತ್ತಿಲ್ಲ ಎಂದು ರಹೀಂ ಖಾನ್ ಹೇಳಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯ ವಿಜಯೇಂದ್ರ, ಜನಗಣತಿ ಮಾನದಂಡವೆಂದು ಪರಿಗಣಿಸಿದರೆ ಗೋಕರ್ಣವನ್ನು ಮೇಲ್ದರ್ಜೆಗೇರಿಸಲು ಸಾಧ್ಯವಿದೆ. ಲಕ್ಷಾಂತರ ಜನ ಇಲ್ಲಿಗೆ ನಿತ್ಯ ಬರುವ ಪ್ರೇಕ್ಷಣೀಯ ಸ್ಥಳ, ಸರಕಾರ ಆದ್ಯತೆ ಮೇಲೆ ಪರಿಗಣಿಸಬೇಕು ಎಂದರು. ಇದಕ್ಕೆ ಧ್ವನಿಗೂಡಿಸಿದ ಸುನೀಲ್ ಕುಮಾರ್, ಪ್ರವಾಸಿಗರು ಹೆಚ್ಚು ಆಗಮಿಸುವ ಪ್ರವಾಸಿ ತಾಣಗಳನ್ನು ಮೇಲ್ದರ್ಜೆಗೇರಿಸಲು ಆದ್ಯತೆ ನೀಡಿದರೆ ಸರಕಾರಕ್ಕೂ ಗೌರವ ಬರುತ್ತದೆ ಎಂದರು.

ಕಾಂಗ್ರೆಸ್‌‍ ಶಾಸಕ ಎಸ್‌‍.ಎನ್‌.ನಾರಾಯಣಸ್ವಾಮಿ ಮಾತನಾಡಿ, 2011ರ ಜನಸಂಖ್ಯೆ ಆಧರಿಸುವ ಮಾನದಂಡ ಸರಿಯಲ್ಲ. ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಜನಸಂಖ್ಯೆ 10 ಪಟ್ಟು ಹೆಚ್ಚಾಗಿದೆ. ಇದನ್ನು ಗಮನದಲ್ಲಿಟ್ಟುಕೊಳ್ಳಬೇಕೆಂದು ಹೇಳಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top