ಕಾರ್ಕಳ: ರಾಜ್ಯದಲ್ಲಿಈಗಾಗಲೇ 6,000 ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಗತಿಯಲ್ಲಿದ್ದು, ಮುಂದಿನ ಮೂರು ವರ್ಷಗಳಲ್ಲಿ 16,000 ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. Breaking news: ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ; ರಸ್ತೆಯಲ್ಲಿಯೇ ಹೊತ್ತಿ ಉರಿದ ಕಾರು, ಲಾರಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟು 16 ಸಾವಿರ ಪೊಲೀಸ್ ಹುದ್ದೆ ಗಳನ್ನು ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಪೊಲೀಸ್ ಬಲ ಮತ್ತಷ್ಟು ಹೆಚ್ಚಲಿದೆ. ಈಗಿರುವ ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿದೆ. ಮಧ್ಯಸ್ಥಿಕೆ ಇಲ್ಲದ ರೀತಿ ನೇಮಕಾತಿ ಪ್ರಕ್ರಿಯೆ ಮಾಡಲಾಗುತ್ತಿದೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಪೊಲೀಸ್ ಇಲಾಖೆಗೆ ಇದೊಂದು ಸವಾಲಿನ ವಿಚಾರ. ಈ ಅಪರಾಧ ಮಟ್ಟ ಹಾಕುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಒಂದೊಂದು ಸೈಬರ್ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು. ಡಾರ್ಕ್ ವೆಬ್ ಮೂಲಕ ಜನರನ್ನು ಸಂಪರ್ಕಿಸಿ ಡ್ರಗ್ ಪೂರೈಕೆ ಮಾಡುತ್ತಿದ್ದ ಅಂತರಾಷ್ಟ್ರೀಯ ಜಾಲವನ್ನು ದೇಶದಲ್ಲಿ ಮೊಟ್ಟ ಮೊದಲು ಮಟ್ಟ ಹಾಕಿದ್ದು ಕರ್ನಾಟಕ ಪೊಲೀಸರು ಎಂಬುದು ಹೆಮ್ಮೆಯ ವಿಚಾರ ಎಂದು ಪ್ರಶಂಸೆ ವ್ಯಕ್ತಪಡಿಸಿದರು.



