ಹಸು ಘಟಕ ಸ್ಥಾಪಿಸುವ ಫ್ಲ್ಯಾನ್ ಇದ್ಯಾ…?  ಮುಖ್ಯಮಂತ್ರಿ ಅಮೃತ ಜೀವನ, ಅಮೃತಧಾರೆ ಯೋಜನೆಯಡಿ ಸಹಾಯ ಧನ ಪಡೆಯಲು ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಮಿಶ್ರತಳಿ ಹಸು ಘಟಕ ಹಾಗೂ ಅಮೃತ ಧಾರೆ ಯೋಜನೆಯಡಿ ಹೋರಿಕರುಗಳನ್ನು ನೀಡುವ ಗುರಿ ಹೊಂದಿದ್ದು, ಆಸಕ್ತ ಫಲಾನುಭವಿಗಳು ನಿಗದಿತ ಅವಧಿಯೊಳಗಾಗಿ ಅರ್ಜಿ ಸಲ್ಲಿಸಬಹುದು.

ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಜಿಲ್ಲೆಗೆ ಸಾಮಾನ್ಯ ವರ್ಗ-77, ಪರಿಶಿಷ್ಟ ವರ್ಗ-15 ಹಾಗೂ ಪರಿಶಿಷ್ಟ ಪಂಗಡದ 07 ಫಲಾನುಭವಿಗಳಿಗೆ ಒಂದು ಮಿಶ್ರತಳಿ ಹಸು ಘಟಕ ಸ್ಥಾಪಿಸಲು ಸಹಾಯ ಧನ ನೀಡುವ ಗುರಿ ನೀಡಲಾಗಿದ್ದು ವಿಧಾನಸಭಾ ಕ್ಷೇತ್ರವಾರು ಗುರಿಗಳನ್ನು ಮರುನಿಗದಿಪಡಿಸಲಾಗಿದೆ. ಆಸಕ್ತರು ಅ.2 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಗೆ ಒಟ್ಟು 62000 ರೂ. ಘಟಕ ವೆಚ್ಚವಿದ್ದು, ಸಹಾಯಧನ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ರೂ.15500 (ಬ್ಯಾಂಕ್ ಸಾಲ ಅಥವಾ ಫಲಾನುಭವಿ ವಂತಿಕೆ ರೂ.46500), ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡದವರಿಗೆ ರೂ.20665 (ಬ್ಯಾಂಕ್ ಸಾಲ ಅಥವಾ ಫಲಾನುಭವಿ ವಂತಿಕೆ ರೂ.41335) ಸಹಾಯಧನ ನೀಡಲಾಗುವುದು.

ಅಮೃತ ಧಾರೆ ಯೋಜನೆಯಡಿ ಅಜ್ಜಂಪುರ ಅಮೃತ ಮಹಲ್ ಕಾವಲ್‍ನಲ್ಲಿ ಹೆಚ್ಚುವರಿಯಾಗಿರುವ ಅಮೃತ ಮಹಲ್ ಹೋರಿಕರುಗಳನ್ನು ಸರ್ಕಾರ ನಿಗದಿಪಡಿಸಿರುವ ದರದಲ್ಲಿ ರೈತರಿಗೆ ನೇರವಾಗಿ ವಿತರಿಸಲಾಗುವುದು. ತಾಲ್ಲೂಕುವಾರು 7 ರಂತೆ ಗುರಿ ನಿಗದಿ ಪಡಿಸಲಾಗಿದ್ದು, ಜಿಲ್ಲೆಯಲ್ಲಿ 42 ಹೋರಿಕರುಗಳನ್ನು ವಿತರಿಸಲಾಗುವುದು. ಆಸಕ್ತರು ಅ.2 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳನ್ನು ವಿಧಾನಸಭಾ ಕ್ಷೇತ್ರವಾರು ಶಾಸಕರ ಅಧ್ಯಕ್ಷತೆಯಲ್ಲಿ ರಚಿತವಾಗಿರುವ ಆಯ್ಕೆ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.

ತಾಲ್ಲೂಕುವಾರು ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರರ ದೂರವಾಣಿ ಸಂಖ್ಯೆ: ಡಾ.ಇಫ್ತೀಕರ್ ಅಲಿ, ಚನ್ನಗಿರಿ -9902905357, ಡಾ.ಜಗದೀಶ್.ಪಿ.ವಿ, ದಾವಣಗೆರೆ -9448005250, ಡಾ.ನಂದ.ಎಸ್.ಎಲ್, ಹರಿಹರ-8073900950, ಡಾ.ಬಾಬುರತ್ನ, ಹೊನ್ನಾಳಿ-9448170225, ಡಾ.ಚಂದ್ರಶೇಖರ್ ಹೊಸಮನಿ, ನ್ಯಾಮತಿ-9632916450, ಡಾ.ಲಿಂಗರಾಜ್.ಕೆ.ಬಿ, ಜಗಳೂರು-9901641942 ಇವರನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *