Connect with us

Dvgsuddi Kannada | online news portal | Kannada news online

ಮೇ 9, 10ರಂದು ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ; ಸಹಕರಿಸುವಂತೆ ಕೆಎಸ್ ಆರ್ ಟಿಸಿ ಸಾರ್ವಜನಿಕರಿಗೆ ಮನವಿ

ಪ್ರಮುಖ ಸುದ್ದಿ

ಮೇ 9, 10ರಂದು ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ; ಸಹಕರಿಸುವಂತೆ ಕೆಎಸ್ ಆರ್ ಟಿಸಿ ಸಾರ್ವಜನಿಕರಿಗೆ ಮನವಿ

ಬೆಂಗಳೂರು: ಇದೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ.  ಈ ಚುನಾವಣೆ ಕರ್ತ್ಯವ್ಯಕ್ಕೆ ಪೊಲೀಸ್ ಸಿಬ್ಬಂದಿ, ಚುನಾವಣೆ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅವರನ್ನು ಒಂದು ದಿನ ಮೊದಲೇ ಮತಕೇಂದ್ರಕ್ಕೆ ಕೊಂಡೊಯ್ಯಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ ಬಸ್ ಗಳನ್ನು ನಿಯೋಜಿಸಲಾಗುತ್ತಿದೆ.  ಈ ಹಿನ್ನಲೆಯಲ್ಲಿ ಮೇ.9, 10ರಂದು ಸಾರಿಗೆ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ಬಿಎಂಟಿಸಿ ಹಾಗೂ ಕೆ ಎಸ್ ಆರ್ ಟಿಸಿ ಸಂಸ್ಥೆಯಿಂದ ಸಾರ್ವಜನಿಕರಿಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.  ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಪರ್ಯಾಯ ಸಂಚಾರದ ವ್ಯವಸ್ಥೆ ಕೈಗೊಳ್ಳುವಂತೆ ವಿನಂತಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top