ನರೇಶ್ ನಮ್ಮ ಹುಡುಗ, ಭೇಟಿ ಮಾಡಿದ್ದು ನಿಜ, ಯುವತಿ ಕೂಡ ಭೇಟಿಗೆ ಪ್ರಯತ್ನಿಸಿದ್ರು: ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಕ್ಷಣ ಕ್ಷಣಕ್ಕೂ ತಿರುವು ಪಡೆಯುತ್ತಿದ್ದು, ನರೇಶ್ ನಮ್ಮ ಹುಡುಗ, ಪಾಪ ಹೆಣ್ಣು ಮಗಳು ನನ್ನನ್ನು ಭೇಟಿ ಮಾಡಲು ಪ್ರಯತ್ನಿಸಿದ್ದು ನಿಜ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ನಾವು ರಾಜಕಾಣಿಗಳು. ಜನರ ಮಧ್ಯೆ ಇದ್ದೇವೆ. ನಾವು ಒಂದು ಪಕ್ಷದಲ್ಲಿ ಗುರುತಿಸಿಕೊಂಡಿದ್ದೇವೆ. ಯಾರದರೂ ಸಮಸ್ಯೆ ಹೇಳಿಕೊಂಡು ಬರುವುದು ಸಮಾನ್ಯ. ಯುವತಿ ಭೇಟಿ ಮಾಡುತ್ತೇನೆ ಎಂದು ಹೇಳಿರಬಹುದು. ದಿನ ಬೆಳಗಾದರೂ, ಇಂತಹ ಅನೇಕ ಸಮಸ್ಯೆಗಳು ಬರುತ್ತವೆ. ಹೀಗಾಗಿ ಯುವತಿ ಬಂದಿರಬಹುದು ಎಂದು ಹೇಳಿಕೆ ನೀಡಿದ್ದಾರೆ.

ಇನ್ನು ನಮ್ಮ ಪಕ್ಷದ ಐದು ಜನರನ್ನು ಸೆಳೆದುಕೊಂಡು ರಮೇಶ್ ಜಾರಕಿಹೊಳಿ ಹೋಗುಗ್ತಿದ್ದರು ಎಂದು ಗೊತ್ತಾದಾಗ ನಾವು ಅವರನ್ನು ಟ್ರ್ಯಾಕ್ ಮಾಡಿದ್ದು ನಿಜ. ಆದರೆ, ಸಿಡಿ ಪ್ರಕರಣ ವೈಯಕ್ತಿಕ ವಿಚಾರ. ಇದರಲ್ಲಿ ನಮ್ಮ ಪಾತ್ರ ಇಲ್ಲ. ನರೇಶ್ ನಮ್ಮ ಹುಡುಗ. ಮಾಧ್ಯಮದಲ್ಲಿ ಇರುವವನು. ನನಗೆ ಬೇಕಾದವನು.  ಅವನ ಮನೆಗೂ ನಾನು  ಹೋಗಿದ್ದೇನೆ. ಅವನು ನಮ್ಮ ಮನೆಗೆ ಬಂದಿದ್ದಾನೆ ಎಂದು ಹೇಳಿದ್ದಾರೆ.  ರಮೇಶ್ ಜಾರಕಿಹೊಳಿಗೆ ಒಳ್ಳೆದು ಆಗಲಿ, ತನಿಖಾಧಿಕಾರಿಗಳು ಚನ್ನಾಗಿ ತನಿಖೆ ನಡೆಸುತ್ತಿದ್ದಾರೆ. ನೋಡೋಣ ಏನು ಆಗುತ್ತೆ ಅಂತಾ…  ಎಂದಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *