ಬೆಂಗಳೂರು: ಸಿಡಿ ಕೇಸ್ ನಲ್ಲಿ ಎಸ್ಐಟಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದದ್ದು, ಕಾನೂನಿನಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಸ್ಐಟಿ ತನಿಖೆಯಲ್ಲಿ ನಾನು ಯಾವುದೇ ಕಾರಣಕ್ಕೂ ಮಧ್ಯ ಪ್ರವೇಶ ಮಾಡೋದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂಧನದ ಬಗ್ಗೆ ಎಸ್ಐಟಿ ಅಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ. ಎಸ್ಐಟಿ ಪೊಲೀಸರು ಕಾನೂನು ಬದ್ಧವಾಗಿ ತನಿಖೆ ನಡೆಸುತ್ತಿದ್ದಾರೆ. ಎಸ್ಐಟಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ಕೂಡ ನೀಡಲಾಗಿದೆ. ಅವರ ಕೆಲಸದಲ್ಲಿ ತಾನು ಮಧ್ಯಪ್ರವೇಶಿಸೋದಿಲ್ಲ. ಕಾಂಗ್ರೆಸ್ ಮೇಟಿ ಪ್ರಕರಣದಲ್ಲಿ ನಡೆದುಕೊಂಡಿದ್ದು ಗೊತ್ತಿದೆ. ಎಫ್ಐಆರ್ ಕೂಡ ದಾಖಲಿಸದೇ ಸಿಐಡಿ ಮೂಲಕ ತನಿಖೆ ನಡೆಸಿ, ಕ್ಲೀನ್ ಚಿಟ್ ಕೊಟ್ಟಿತ್ತು. ಕಾಂಗ್ರೆಸ್ ಪಕ್ಷಕ್ಕೆ ಈ ಪ್ರಕರಣದ ಬಗ್ಗೆ ಮಾತನಾಡುವಂತ ನೈತಿಕ ಹಕ್ಕಿಲ್ಲ ಇಲ್ಲ ಎಂದರು.



