Connect with us

Dvgsuddi Kannada | online news portal | Kannada news online

ಚಿತ್ರದುರ್ಗ: 20 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ತಾಲೂಕು ಪಂಚಾಯಿತಿ ಇ.ಓ

ಪ್ರಮುಖ ಸುದ್ದಿ

ಚಿತ್ರದುರ್ಗ: 20 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ತಾಲೂಕು ಪಂಚಾಯಿತಿ ಇ.ಓ

ಚಿತ್ರದುರ್ಗ:  ಜಿಲ್ಲೆಯ ಚಳ್ಳಕೆರೆ ತಾಲೂಕು ಪಂಚಾಯಿತಿ ಬೆಳಗೆರೆ ಗ್ರಾಮ ಪಂಚಾಯಿತಿಯ ಪಿಡಿಒಯಿಂದ 20 ಸಾವಿರ ಲಂಚ ಪಡೆಯುತ್ತಿದ್ದ ತಾಲೂಕು ಪಂಚಾಯಿತಿ ಇ.ಓ .ಶ್ರೀಧರ್  ಭ್ರಷ್ಟಾಚಾರ ನಿಗ್ರಹ ದಳದ  ಬಲೆಗೆ ಬಿದ್ದಿದ್ದಾರೆ.

ಶ್ರೀಧರ್ ಅವರ ಮನೆ, ಕಚೇರಿ ಸೇರಿ ಹಲವೆಡೆ  ಎಸಿಬಿ ದಾಳಿ ನಡೆಸಿದ್ದು,  ಆಸ್ತಿ ಪತ್ರಗಳು, ಬ್ಯಾಂಕ್ ಖಾತೆ ಹಾಗೂ  6 ಲಕ್ಷ ನಗದು ಪತ್ತೆಯಾಗಿದೆ. ನಗದು ಹಣದ ಬಗ್ಗೆ ಸೂಕ್ತ ಮಾಹಿತಿ ನೀಡದ ಕಾರಣ ಶ್ರೀಧರ್ ಅವರನ್ನು ಎಸಿಬಿ ಬಂಧಿಸಿದೆ.

ಚಳ್ಳಕೆರೆ ತಾಲ್ಲೂಕಿನ ಬೆಳಗೆರೆ ಗ್ರಾಮ ಪಂಚಾಯಿತಿಯಲ್ಲಿ 14ನೇ ಹಣಕಾಸಿನಲ್ಲಿ 7.71 ಲಕ್ಷ ಅನುದಾನ ಉಳಿದಿತ್ತು. ಈ ಹಣದಲ್ಲಿ ಹತ್ತು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕ್ರಿಯೆಯೋಜನೆ ಸಿದ್ಧಪಡಿಸಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಲಾಗಿತ್ತು. ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಶ್ರೀಧರ್ ಅವರಿಗೆ ರವಾನೆ ಮಾಡಿದ್ದರು.

ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದ ಪ್ರತಿಯನ್ನು ಹಸ್ತಾಂತರಿಸಲು ಬೆಳಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗುಂಡಪ್ಪ ಅವರಿಗೆ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ  ಲಂಚದ ಹಣ  ಪಡೆಯುವಾಗ ಎಸಿಬಿ ಡಿವೈಎಸ್ಪಿ ಬಸವರಾಜ್ ಆರ್. ಮಗದುಮ್ ನೇತೃತ್ವದ ತಂಡ ದಾಳಿ ನಡೆಸಿದೆ.

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top