ಬೆಂಗಳೂರು: ನೆರೆಯ ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿದ್ದು, ರಾಜ್ಯಕ್ಕೂ ಕಂಟಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಕೇರಳದಲ್ಲಿ ವೈರಸ್ ಗೆ 12 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಇದೀಗ ಆತನ ಕುಟುಂಬದ 11 ಜನರಲ್ಲಿ ನಿಫಾ ಲಕ್ಷಣಗಳು ಕಂಡು ಬಂದಿದೆ . ಹೀಗಾಗಿ ಮುನ್ನಚ್ಚೆರಿಕೆ ವಹಿಸುವಂತೆ ಕೇಂದ್ರ ಆರೋಗ್ಯ ಇಲಾಖೆ ಕೇರಳ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ನಿಫಾ ವೈರಸ್ ಬಗ್ಗೆ ತಜ್ಞರಿಂದ ವರದಿ ಕೇಳಿದ್ದೇನೆ. ವೈರಸ್ ಹರಡದಂತೆ ಮುಂಜಾಗೃತವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ, ಸಿಎಂ ಸೂಚನೆ ಬೆನ್ನಲ್ಲೇ ಕೇರಳದ ಗಡಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸುತ್ತಮುತ್ತ ನಿಫಾ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಆರೋಗ್ಯಾಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದರು.



