‘ಮಹಾ’ ಸಿಎಂಗೆ ಸಿಎಂ ಯಡಿಯೂರಪ್ಪ ಖಡಕ್ ಎಚ್ಚರಿಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ಖಡಕ್ ತಿರುಗೇಟು ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಓರ್ವ ಮುಖ್ಯಮಂತ್ರಿ ಎರಡು ರಾಜ್ಯದ ಸೌಹಾರ್ದಯುತ ವಾತಾವರಣ ಕೆಡಿಸುವ ಯತ್ನ ನಡೆಸುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವ ಗೌರವಿಸುವ ಬದ್ಧತೆ ತೋರಲಿ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

 

 

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *