ಬೆಂಗಳೂರು : ರಾಷ್ಟ್ರವ್ಯಾಪಿ ಕೊರೊಆನಾ ಸೋಂಕಿನ ಲಸಿಕಾ ಅಭಿಯಾನ ಆರಂಭಗೊಂಡಿದ್ದು, ಇಂದು ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅಭಿಯಾನಕ್ಕೆ ಚಾಲನೆ ನೀಡಿದರು.
ಚಾಲನೆ ನೀಡಿದ ಬಳಿಕ ಮಾತನಾಡಿದಂತ ಸಿಎಂ , ಲಸಿಕೆಯ ಬಗ್ಗೆ ಭಯ, ಆತಂಕ ಬೇಡ ಬೇಕಿಲ್ಲ . ಇದು ಸುರಕ್ಷಿತವಾದಂತ ಲಸಿಕೆಯಾಗಿದೆ ಎಂದು ತಿಳಿಸಿದ್ದಾರೆ. ದೇಶದಾದ್ಯಂತ ಕೊರೊನಾ ಲಸಿಕೆ ಅಭಿಯಾನಕ್ಕೆ ಮೋದಿ ಚಾಲನೆ ನೀಡಿದ್ದು, 3 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲಾಗುವುದು. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ನೀಡಲಿದ್ದು, ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ಹೆಚ್ಚು ಮಾಡುತ್ತೇವೆ ಎಂದು ತಿಳಿಸಿದ್ಧಾರೆ . ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ.ಸುದರ್ಶನ್ ಬಲ್ಲಾಳ್ ಸಹ ಲಸಿಕೆಯನ್ನು ಪಡೆದಿದ್ದಾರೆ.



