ದಾವಣಗೆರೆ: ಸರ್ಕಾರದ ನಿರ್ದೇಶನದಂತೆ ಹಾಗೂ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ದಿ) ದಾವಣಗೆರೆ ತಾಲ್ಲೂಕಿನ ಕೃಷಿ ಸಹಕಾರ ಸಂಸ್ಕರಣ ಸಂಘ ಕ್ಷೇತ್ರದಿಂದ ತೆರವಾಗಿರುವ ಸದಸ್ಯ ಸ್ಥಾನಕ್ಕೆ ಉಪಚುನಾವಣೆಯನ್ನು ನಡೆಸಿ ಸದಸ್ಯರನ್ನು ಚುನಾಯಿಸಲು ಚುನಾವಣಾ ವೇಳಾ ಪಟ್ಟಿ ಪ್ರಕಟಿಸಲಾಗಿದೆ.
ಕೃಷಿ ಸಹಕಾರ ಸಂಸ್ಕರಣ ಕ್ಷೇತ್ರ್ರ ಸ್ಥಾನ-01, ಮೀಸಲಾತಿ ಸಾಮಾನ್ಯ ಅಭ್ಯರ್ಥಿ. ಮಾ.04 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದ್ದು, ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಚುನಾವಣಾಧಿಕಾರಿಗಳು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ದಾವಣಗೆರೆ ಹಾಗೂ ತಹಶೀಲ್ದಾರ್, ದಾವಣಗೆರೆ ಇವರ ಕಾರ್ಯಾಲಯದಲ್ಲಿ ನಾಮಪತ್ರಗಳನ್ನು ಸಲ್ಲಿಸಬಹುದು. ಮಾ.05 ರಂದು ನಾಮಪತ್ರಗಳನು ಪರಿಶೀಲಿಸುವ ದಿನಾಂಕವಾಗಿದೆ. ಮಾ.08 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ಮಾ.18 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಲಾಗುವುದು. ಮಾ.20 ರಂದು ಮತಗಳ ಎಣಿಕೆ ನಡೆಸಲಾಗುವುದು.
ಚುನಾವಣಾ ವೇಳಾಪಟ್ಟಿಯಂತೆ ನಿಯಮಾನುಸಾರ ಚುನಾವಣೆ ಪ್ರಕ್ರಿಯನ್ನು ಪ್ರಾರಂಭಿಸಲು ಚುನಾವಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



