Connect with us

Dvgsuddi Kannada | online news portal | Kannada news online

ಹಕ್ಕಿಜ್ವರ ಭೀತಿ:  ಜಿಲ್ಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲು ಡಿಸಿ ಸೂಚನೆ

ಪ್ರಮುಖ ಸುದ್ದಿ

ಹಕ್ಕಿಜ್ವರ ಭೀತಿ:  ಜಿಲ್ಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲು ಡಿಸಿ ಸೂಚನೆ

ದಾವಣಗೆರೆ : ನೆರೆಯ ರಾಜ್ಯ ಕೇರಳದಲ್ಲಿ ಹಕ್ಕಿಜ್ವರ ಪ್ರಕರಣಗಳು ಕಂಡುಬಂದಿದ್ದು, ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಅಧಿಕಾರಿಗಳು ತೀವ್ರ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಗುರುವಾರ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನೆರೆಯ ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ಪ್ರಕರಣಗಳು ಕಂಡುಬಂದಿವೆ. ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ಜಿಲ್ಲೆಯಲ್ಲಿಯೂ ಕೆಲವೆಡೆ ಪ್ರಕರಣ ಕಂಡುಬಂದಿತ್ತು. ಸದ್ಯ ಜಿಲ್ಲೆಯಲ್ಲಿ ಅಂತಹ ಯಾವುದೇ ಪ್ರಕರಣ ವರದಿಯಾಗಿಲ್ಲ. ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಅಧಿಕಾರಿಗಳು ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತಹಸಿಲ್ದಾರರು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲ ಕೋಳಿಫಾರಂ ಗಳಲ್ಲಿ ಪರಿಶೀಲನೆ ನಡೆಸಬೇಕು.

ಕೋಳಿ ಫಾರಂ ಪ್ರದೇಶದಲ್ಲಿ ಸೋಂಕು ನಿವಾರಕಗಳನ್ನು ಬಳಸಿ, ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು, ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಅಧಿಕಾರಿಗಳು ಕೋಳಿ ಫಾರಂಗಳ ಮಾಲೀಕರಿಗೆ ತಾಕೀತು ಮಾಡಬೇಕು. ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ನಿಯಮಿತವಾಗಿ ಕೋಳಿ ಫಾರಂಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಪರಾಮರ್ಶೆ ಮಾಡಬೇಕು. ಜಿಲ್ಲೆಯ ಯಾವುದೇ ಅರಣ್ಯ ಪ್ರದೇಶ, ಕೆರೆ ಕಟ್ಟೆ ನೀರು ನಿಲ್ಲುವ ಪ್ರದೇಶಗಳಲ್ಲಿ ವಲಸೆ ಹಕ್ಕಿಗಳು ಅಥವಾ ಯಾವುದೇ ಹಕ್ಕಿಗಳ ಅಸಹಜ ಸಾವು ಕಂಡುಬಂದಲ್ಲಿ, ಮಾಹಿತಿ ಪಡೆದು ಕೂಡಲೆ ತ್ವರಿತವಾಗಿ ಸ್ಪಂದಿಸುವ ಕಾರ್ಯ ಆಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಸೇರಿದಂತೆ ತಾಲ್ಲೂಕುಗಳ ತಹಸಿಲ್ದಾರರು ಭಾಗವಹಿಸಿದ್ದರು.

 

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});