Connect with us

Dvgsuddi Kannada | online news portal | Kannada news online

ಮಹಾರಾಷ್ಟ್ರ ಸಿಎಂ  ಅವಿವೇಕದ ಹೇಳಿಕೆ; ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ: ಡಿಸಿಎಂ ಲಕ್ಷ್ಮಣ ಸವದಿ

Home

ಮಹಾರಾಷ್ಟ್ರ ಸಿಎಂ  ಅವಿವೇಕದ ಹೇಳಿಕೆ; ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ: ಡಿಸಿಎಂ ಲಕ್ಷ್ಮಣ ಸವದಿ

ದಾವಣಗೆರೆ: ಬೆಳಗಾವಿ ಬಗ್ಗೆ ಮಹಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಅವಿವೇಕತನದಿಂದ ಕೂಡಿದ್ದು, ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿ ಆಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬೆಳಗಾವಿ, ನಿಪ್ಪಾಣಿ ರಾಜ್ಯದ ಅವಿಭಾಜ್ಯ ಅಂಗಗಳು. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕೆಂಬ ಠಾಕ್ರೆ ಹೇಳಿಕೆ ರಾಜಕೀಯ ಪ್ರೇರಿತ. ಅವರು ಒಂದು ರಾಜ್ಯದ ಮುಖ್ಯಮಂತ್ರಿಯಾಗಿ ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ.

ಅನೇಕ ವರ್ಷಗಳ ಹಿಂದೆ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ತೀರ್ಮನಾನವಾಗಿದ್ದು, ರಾಜ್ಯದ ಅವಿಭಾಜ್ಯ ಅಂಗವಾಗಿದೆ. ಇಂತಹ ಗೊಂದಲ ತರುವಂತಹ ಹೇಳಿಕೆ ಒಂದು ರಾಜ್ಯದ ಮುಖ್ಯಮಂತ್ರಿಯಾದ ಉದ್ಧವ್ ಠಾಕ್ರೆಗೆ ಶೋಭೆ ತರುವಂತಹದಲ್ಲ.ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿಗಳು ಬಂದು ಹೇಳಿದರೂ ಬೆಳಗಾವಿ, ನಿಪ್ಪಾಣಿ ಕರ್ನಾಟದಲ್ಲೇ ಇರುತ್ತದೆ ಎಂದು ಕಿಡಿಕಾರಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});