ದಾವಣಗೆರೆ ಉದ್ಯಮಶೀಲರಿಗೆ ಗುಡ್ ನ್ಯೂಸ್; ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಹಂಚಿಕೆಗೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ:   ಜಿಲ್ಲೆಯ ದಾವಣಗೆರೆ ಉದ್ಯಮಶೀಲರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು,  ಹರಿಹರ ತಾಲ್ಲೂಕಿನ ಸಾರಥಿ-ಕುರುಬರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಹಂಚಿಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಹಿಂದೆ ಹರಿಹರ ತಾಲ್ಲೂಕಿನ ಹನಗವಾಡಿ ಕೈಗಾರಿಕಾ ಪ್ರದೇಶದಲ್ಲಿ ಅರ್ಜಿ ಸಲ್ಲಿಸಿ ನಿವೇಶನ ಪಡೆಯದವರು ಸಾರಥಿ-ಕುರುಬರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಪ.ಜಾತಿ/ಪ.ಪಂದವರಿಗೆ ಶೇ.22.65 ರಷ್ಟು ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗ ಪ್ರವರ್ಗ-1, 2-ಎ, ಅಂಗವಿಕಲರು/ಮಾಜಿ ಸೈನಿಕರು, ಶೇ.5 ರಷ್ಟು ಮೀಸಲಿರಿಸಿದ್ದು, ಉಳಿಸಿದ್ದು ಸಾಮಾನ್ಯ ವರ್ಗದವರಿಗೆ ಆಯಾ ಮೀಸಲಾತಿಗಳಲ್ಲಿ ಶೇ.5 ರಷ್ಟು ಮಹಿಳೆಯರಿಗೆ ಸಹ ಕಾಯ್ದಿರಿಸಲಾಗಿದೆ.

ಆಸಕ್ತ ಉದ್ಯಮಶೀಲರು ರೂ.250 ಅರ್ಜಿ ಶುಲ್ಕದ ಡಿ.ಡಿ ಯನ್ನು ಕೆಐಎಡಿಬಿ ದಾವಣಗೆರೆ ಇವರ ಹೆಸರಿಗೆ ತೆಗೆದು ಕೆಐಎಡಿಬಿಐ ಕಚೇರಿಯಲ್ಲಿ ದಾವಣಗೆರೆ ಇಲ್ಲಿಗೆ ಸಲ್ಲಿಸಬಹುದು. ಅಜಿ ಸಲ್ಲಿಸಲು ಫೆ.10 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯಪಾಲಕ ಅಭಿಯಂತರರು, ಕೆಐಎಡಿಬಿ ದಾವಣಗೆರೆ ಅಥವ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ದಾವಣಗೆರೆ ಕಚೇರಿಗೆ ಸಲ್ಲಿಸಬಹುದು. ದೂ.ಸಂ: 08192-262001, 262788, 261055 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಜಯಪ್ರಕಾಶ್ ನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *