ಗುಂಪುಗಾರಿಕೆ ಮಾಡದಂತೆ ಅಮಿತ್ ಶಾ ಸೂಚನೆ: ಲಕ್ಷ್ಮಣ ಸವದಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸಂಪುಟ ವಿಸ್ತರಣೆ ಬಗ್ಗೆ ಗುಂಪುಗಾರಿಕೆ ಮಾಡದಂತೆ ಎಲ್ಲಾ ಶಾಸಕರಿಗೆ ಗೃಹ ಸಚಿವ  ಅಮಿತಾ ಶಾ ಸೂಚನೆ  ನೀಡಿದ್ಧಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.

ಶಾಸಕರು ತಮ್ಮ ಅಸಮಾಧಾನ ಏನೇ ಇದ್ದರೂ ಪಕ್ಷದ ರಾಜ್ಯದ ಅಧ್ಯಕ್ಷರ ಬಳಿ ಹೇಳಬೇಕು. ಅದನ್ನು ಹೊರತುಪಡಿಸಿ ಗುಂಪುಗಾರಿಕೆ ಮಾಡುವಂತಿಲ್ಲ. ರೇಣುಕಾಚಾರ್ಯ ಅವರಿಗೆ  ಬಹುದಿನದಿಂದ ಮಂತ್ರಿಯಾಗಬೇಕೆಂಬ ಆಸೆ ಇದೆ.  ಆದರೆ,  ಅವರು ಬಹಿರಂಗವಾಗಿ ಹೇಳಿಕೆ ಕೊಡುವುದನ್ನು ಬಿಟ್ಟು ಪಕ್ಷದ ಚೌಕಟ್ಟಿನಲ್ಲಿ ನಾಲ್ಕು ಗೋಡೆ ಮಧ್ಯೆ ಕೊಡಬೇಕಿತ್ತು ಎಂದರು.

ನಮ್ಮದು ಬಹುಮತದ ಸರ್ಕಾರವಾಗಿದ್ದರೆ ಈ ಸಮಸ್ಯೆ ಇರುತ್ತಿರಲಿಲ್ಲ. ಸಮ್ಮಿಶ್ರ ಸರ್ಕಾರ ಧಿಕ್ಕರಿಸಿ ಬಂದವರಿಗೆ ನ್ಯಾಯ ಒದಗಿಸಬೇಕಿತ್ತು.  ಆ ಕಾರಣದಿಂದ ಕೆಲವರಿಗೆ ಅವಕಾಶ ನೀಡಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಎಲ್ಲರಿಗೂ ಅವಕಾಶ ಸಿಗುತ್ತದೆ ಎಂದು ತಿಳಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *