ದಾವಣಗೆರೆ: 220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ವಿದ್ಯಾನಗರ ಫೀಡರ್ನಲ್ಲಿ ಕೆ.ಯು.ಐ.ಡಿ.ಎಫ್.ಸಿ. ವತಿಯಿಂದ ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ, ಹೀಗಾಗಿ ಇಂದು (ಫೆ.25) ಬೆಳಿಗ್ಗೆ 10 ರಿಂದ ಸಂಜೆ 4 ವರಗೆ ವಿದ್ಯತ್ ವ್ಯತ್ಯವಾಗಲಿದೆ. ವಿದ್ಯಾನಗರ ಫೀಡರ್ನ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್ ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.



