ಬೆಂಗಳೂರು: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಒಂದು ವಾರದಲ್ಲಿ ಪರಿಷ್ಕರಣೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸಾರಿಗೆ ನಿಗಮಗಳು ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಹಲವು ಸುತ್ತಿನ ಸಭೆ ನಡೆಸಿ ವೇತನ ಪರಿಷ್ಕರಣೆ ಸ್ವರೂಪದ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಆರ್ಥಿಕ ಹೊರೆಯ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ಮಾಡಿದ ಬಳಿಕ ವೇತನ ಪರಿಷ್ಕರಣೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಲಾಗಿದೆ. ವೇತನ ಪರಿಷ್ಕರಣೆ ಬೇಡಿಕೆಯನ್ನು ಕೂಡ ಈ ವಾರವೇ ನಿರ್ಧರಿಸಲಾಗುವುದು. ಸಾರಿಗೆ ನೌಕರರು ಏಪ್ರಿಲ್ 7 ರಂದು ಕೈಗೊಂಡ ಮುಷ್ಕರ ಕೈಬಿಡಬೇಕು. ಮುಷ್ಕರದಿಂದ ವಿದ್ಯಾರ್ಥಿಗಳು ಬಡ-ಮಧ್ಯಮ ವರ್ಗದ ಜನರಿಗೆ ಸಮಸ್ಯೆಯಾಗುತ್ತದೆ. ಕೊರೊನಾ ಆರ್ಥಿಕ ಸಂಕಷ್ಟದ ನಡುವೆಯೂ ನೌಕರರ ಹಿತರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.



