ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಮಹತ್ವದ ಬದಲಾವಣೆ; ಈ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ..

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ನವದೆಹಲಿ: ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಮಹತ್ವದ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಸ್ವಂತ ಹೆಸರಲ್ಲಿ ಭೂಮಿ ಹೊಂದಿದ ರೈತರಿಗೆ ಮಾತ್ರ ಇನ್ಮುಂದೆ  6,000 ರೂ. ನೀಡಲಿದೆ.

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.  ಇದುವರೆಗೆ ಮೃತಪಟ್ಟ ರೈತರಿದ್ದರೆ, ಅದಕ್ಕೆ ಪೂರಕ ದಾಖಲೆ ಸಲ್ಲಿಸಿ ಪತ್ನಿ ಅಥವಾ ಅವರ ಮಕ್ಕಳ ಖಾತೆಗೆ ಹಣ ಜಮಾ ಮಾಡಲಾಗುತ್ತಿತ್ತು. ಆದರೆ, ಈಗ ಯೋಜನೆಯ ಪ್ರಯೋಜನ ಪಡೆಯಬೇಕಾದರೆ, ತಮ್ಮ ಹೆಸರಿಗೆ ಜಮೀನು ನೋಂದಣಿ ಮಾಡಿಸಿಕೊಳ್ಳಬೇಕಿದೆ.  ಇನ್ನೂ ತಮ್ಮ ಹೆಸರಿಗೆ ಜಮೀನು ನೋಂದಣಿ ಮಾಡಿಸಿಕೊಳ್ಳದ ರೈತರಿಗೆ ಯೋಜನೆಯ ಪ್ರಯೋಜನ ಸಿಗುವುದಿಲ್ಲ.

ತಂದೆ ಅಥವಾ ಅಜ್ಜನ ಹೆಸರಲ್ಲಿ ಜಮೀನಿದ್ದು ಮೊಮ್ಮಗ ಉಳುಮೆ ಮಾಡುತ್ತಿದ್ದರೂ ಯೋಜನೆಯ ಪ್ರಯೋಜನ ಸಿಗುವುದಿಲ್ಲ. ತಮ್ಮ ಹೆಸರಲ್ಲಿ ಜಮೀನಿನ ಮಾಲೀಕತ್ವ ಹೊಂದಿರಬೇಕಿದೆ. ಬಹುತೇಕ ರೈತರು ತಮ್ಮ ಹೆಸರಿಗೆ ಜಮೀನು ವರ್ಗಾವಣೆ ಮಾಡಿಕೊಂಡಿಲ್ಲದ ಕಾರಣ ಅವರಿಗೆ ಯೋಜನೆ ಪ್ರಯೋಜನ ತಪ್ಪುವ ಸಾಧ್ಯತೆ ಇದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *