Connect with us

Dvgsuddi Kannada | online news portal | Kannada news online

ಪ್ರಯಾಣಿಕರಿಗೆ ಗುಡ್ ನ್ಯೂಸ್: ತೈಲ ದರ ಏರಿದ್ದರೂ ಬಸ್ ದರ ಏರಿಕೆ ಇಲ್ಲ; ಸಾರಿಗೆ ಸಚಿವ ಲಕ್ಷ್ಮಣ ಸವದಿ

ರಾಜ್ಯ ಸುದ್ದಿ

ಪ್ರಯಾಣಿಕರಿಗೆ ಗುಡ್ ನ್ಯೂಸ್: ತೈಲ ದರ ಏರಿದ್ದರೂ ಬಸ್ ದರ ಏರಿಕೆ ಇಲ್ಲ; ಸಾರಿಗೆ ಸಚಿವ ಲಕ್ಷ್ಮಣ ಸವದಿ

ಕಲಬುರ್ಗಿ: ತೈಲ ದರ ಹೆಚ್ಚಾಗಿದ್ದರೂ ರಾಜ್ಯದಲ್ಲಿ ಬಸ್‌ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು.

ಬಸ್‌ ಪ್ರಯಾಣ ದರ ಹೆಚ್ಚಳ ಮಾಡುವಂತೆ ವಿವಿಧ ಸಾರಿಗೆ ಸಂಸ್ಥೆಗಳಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ.  ಆದರೆ, ಕೊರೊನಾ ಹಾವಳಿ‌ ಹಾಗೂ ನೈಸರ್ಗಿಕ ವಿಕೋಪದಿಂದ ಸಾಮಾನ್ಯ ಜನರು ಈಗಾಗಲೇ ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಇಂಥದರಲ್ಲಿ ಬಸ್‌ ಪ್ರಯಾಣ ದರ ಪರಿಷ್ಕರಣೆ ಮಾಡಿದರೆ ಅವರಿಗೆ ಮತ್ತಷ್ಟು ತೊಂದರೆ ಕೊಟ್ಟಂತಾಗುತ್ತದೆ ಸಚಿವರು ಸುದ್ದಿಗಾರರಿಗೆ ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಳೆದ ಬಾರಿಯ ಬಜೆಟ್‌ನಲ್ಲಿ ಸಾರಿಗೆ ಸಂಸ್ಥೆಯ ನಾಲ್ಕೂ ಘಟಕಗಳಿಗೆ ತಲಾ ಒಂದು ಸಾವಿರ ಹೊಸ ಬಸ್‌ ನೀಡುವುದಾಗಿ ಘೋಷಿಸಿದ್ದರು. ಕೊರೊನಾ   ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ್ದರಿಂದ ಅದು ಈಡೇರಲಿಲ್ಲ. ಈಗಾಗಲೇ ಶೇ 90ರಷ್ಟು ಬಸ್‌ಗಳು ಓಡಾಟ ಆರಂಭವಾಗಿದೆ. ಏಪ್ರಿಲ್‌ ತಿಂಗಳ ಅಂತ್ಯಕ್ಕೆ ಮತ್ತೆ ಮೊದಲಿನ ಸ್ಥಿತಿಗೆ ಬರಲಿದೆ ಎಂದರು.

ಈ ಬಾರಿಯ ಬಜೆಟ್‌ನಲ್ಲಿ ಈಶಾನ್ಯ, ವಾಯವ್ಯ ರಸ್ತೆ ಸಾರಿಗೆ ಸಾರಿಗೆ ಸಂಸ್ಥೆಗಳು ಹಾಗೂ ಕೆಎಸ್‌ಆರ್‌ಟಿಸಿಗೆ ತಲಾ ಒಂದು ಸಾವಿರ ಬಸ್‌ ನೀಡಲಾಗುವುದು. ಹಳೆಯ ಬಸ್‌ಗಳನ್ನು ಗುಜರಿಗೆ ಹಾಕುವ ಬದಲು ಸ್ವಲ್ಪ ಸುಧಾರಣೆ ಮಾಡಿ, ಸಾಮಾಜಿಕ ಉದ್ದೇಶಗಳಿಗೆ ಬಳಸಿಕೊಳ್ಳುವ ಉಪಾಯ ಮಾಡಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಈ ಬಸ್‌ಗಳನ್ನೇ ಶೌಚಾಲಯ, ಡೇ ಕೇರ್‌ ಸೆಂಟರ್‌, ಹಾಲುಣಿಸುವ ಮಹಿಳೆಯರ ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದೂ ಸಚಿವರು ಮಾಹಿತಿ ನೀಡಿದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

To Top