ಬೆಂಗಳೂರು: ರಾಜ್ಯದಲ್ಲಿ ಪ್ರತಿ ದಿನ 50 ಸಾವಿರಕ್ಕಿಂತ ಹೆಚ್ಚು ಕೇಸುಗಳು ದಾಖಲಾಗುತ್ತಿರುವುದರಿಂದ ಮೇ 10 (ಸೋಮವಾರ) ರಿಂದ ರಾಜ್ಯ ಸಂಪೂರ್ಣ ಲಾಕ್ ಡೌನ್ ಹೇರುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಸುಳಿವನ್ನು ನೀಡಿದ್ದಾರೆ.
ಬಿಗಿಯಾದ ಲಾಕ್ ಡೌನ್ ತೆಗೆದುಕೊಳ್ಳುವ ಅನಿವಾರ್ಯತೆಯಿದೆ. ಕೊರೊನಾದಿಂದ ಮುಕ್ತವಾಗಿ, ದೇಶದಲ್ಲಿ ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
ಜನತಾ ಕರ್ಫ್ಯೂವನ್ನು ಜನರು ಸರಿಯಾಗಿ ಪಾಲಿಸುತ್ತಿಲ್ಲ, ಸರ್ಕಾರದ ನಿಯಮ ಪಾಲಿಸುತ್ತಿಲ್ಲ. ಆದ್ದರಿಂದ ಲಾಕ್ ಡೌನ್ ಅನಿವಾರ್ಯ. ಕಠಿಣ ಕ್ರಮ ತೆಗೆದುಕೊಳ್ಳಬಾರದು ಎಂದಾದ್ರೆ ಜನರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಸಿಎಂ ಮನವಿ ಮಾಡಿದರು.
ಆಕ್ಸಿಜನ್ ಸಮಸ್ಯೆ ಪರಿಹರಿಸಲು ಸಂಬಂಧಪಟ್ಟ ಸಚಿವರು ಕೇಂದ್ರದ ಜೊತೆ ಮಾತನಾಡುತ್ತಿದ್ದಾರೆ. ಸದ್ಯದಲ್ಲೇ ಇದಕ್ಕೆ ಪರಿಹಾರ ಸಿಗಲಿದೆ. ಸಾರ್ವಜನಿಕರು ಮುಖ್ಯಮಂತ್ರಿಗಳ ಕಚೇರಿ ಬಳಿ ಬರುವುದು ತಪ್ಪು ಎಂದು ಹೇಳುವುದಿಲ್ಲ. ಆದರೆ, ಈಗಿನ ಸಮಯ ಸರಿಯಿಲ್ಲ. ಏನೇ ತೊಂದರೆ ಇದ್ದರೂ ಅಧಿಕಾರಿಗಳಿಗೆ ತಿಳಿಸಿದರೆ, ಅವರು ಗಮನ ಹರಿಸುತ್ತಾರೆ ಎಂದರು.



