ಬೆಂಗಳೂರು: ಮುಂದಿನ ಎರಡು ವರ್ಷಗಳಲ್ಲಿ 20 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು. ನಾಳೆಯಿಂದ ಅಧಿವೇಶನ; ಫೆ. 5 ವರೆಗೆ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಸಂಘಗಳ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ವಿಷಯ ತಿಳಿಸಿದ ಸಚಿವರು, ಶಿಕ್ಷಕ ಮಿತ್ರ ಆ್ಯಪ್ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ತಂತ್ರಜ್ಞಾನದ ಪರಿಹಾರ, 2,500 ಟಿಜಿಟಿ ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ 3,008 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ, 2,404 ಪ್ರೌಢಶಾಲಾ ಶಿಕ್ಷಕರಾಗಿ, 1,342 ಪ್ರೌಢಶಾಲಾ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ, 396 ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಪ್ರಾಂಶುಪಾಲರಾಗಿ ಬಡ್ತಿ, 40 ಮಂದಿ ಪ್ರಾಂಶುಪಾಲರಿಗೆ ಪದವಿ ಪೂರ್ವ ಶಿಕ್ಷಣ ಉಪ ನಿರ್ದೇಶಕರಾಗಿ ಬಡ್ತಿ, 200ಕ್ಕೂ ಹೆಚ್ಚು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಬಡ್ತಿ ಸೇರಿದಂತೆ ಹಲವು ವರ್ಷಗಳಿಂದ ಬಾಕಿ ಇದ್ದ ಪದೋನ್ನತಿಗಳನ್ನು ಪೂರ್ಣಗೊಳಿಲಾಗುವುದು ಎಂದರು.



