ಬೆಂಗಳೂರು:ನಾಳೆ (ಜ.13) ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದು, ನೂತನ ಸಚಿವರಾಗಿ ಯಾರಾಗ್ತಾರೆ ಎಂಬ ಮಾಹಿತಿಯನ್ನು ಬಿಟ್ಟು ಕೊಟ್ಟಿಲ್ಲ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯತಿಸಿದ ಸಿಎಂ, ಸಂಜೆ ವರೆಗೆ ಕಾಯಿರಿ ಎಂದಷ್ಟೇ ಹೇಳಿದ್ದಾರೆ.
ಸಂಪುಟ ವಿಸ್ತರಣೆ ದಿನ ನಿಗದಿಯಾದ ಬೆನ್ನಲ್ಲೇ ಮುಖ್ಯಮಂತ್ರಿಯನ್ನು ಭೇಟಿಯಾಗುತ್ತಿರುವ ಶಾಸಕರು, ಸಚಿವರ ಸಂಖ್ಯೆ ಹೆಚ್ಚಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಮಾತ್ರ ಯಾವುದೇ ಹೆಚ್ಚಿನ ಮಾಹಿತಿ ಬಿಟ್ಟುಕೊಡುತ್ತಿಲ್ಲ. ಯಾರನ್ನು ಸಂಪುಟದಿಂದ ಕೈಬಿಡಬೇಕು. ಯಾರನ್ನು ಸೇರಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಪಟ್ಟಿ ತಯಾರಾಗಿಲ್ಲ. ಸಂಜೆ ದೆಹಲಿ ನಾಯಕರೇ ಅಂತಿಮ ಪಟ್ಟಿ ಕೊಡುತ್ತಾರೆ ಕಾಯಿರಿ ಎಂದರು.



