ರಾಜ್ಯ ಸಚಿವ ಸಂಪುಟ ವಿಸ್ತರಣೆ: 7 ನೂತನ ಸಚಿವರ ಪ್ರಮಾಣ ವಚನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು : ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಇಂದು ಸಂಪುಟ ವಿಸ್ತರಿಸಿದೆ. ನೂತನ 7 ಶಾಸಕರು ಸಚಿವರಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಅರವಿಂದ ಲಿಂಬಾವಳಿ, ಆರ್.ಶಂಕರ್, ಎಂಟಿಬಿ.ನಾಗರಾಜ್, ಅಂಗಾರ, ಮುರುಗೇಶ್ ನಿರಾಣಿ, ಸಿ.ಪಿ.ಯೋಗೀಶ್ವರ್ ಹಾಗೂ ಉಮೇಶ್ ಕತ್ತಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮೊದಲು ಆಗಮಿಸಿದಂತ ಶಾಸಕ ಉಮೇಶ್ ಕತ್ತಿಯವರು ಸಂಪುಟ ದರ್ಜೆಯ ಸಚಿವರಾಗಿ ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.  ಅರವಿಂದ ಲಿಂಬಾವಳಿಯವರು ದೇವರ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಎಂ.ಟಿ.ಬಿ.ನಾಗರಾಜ್ ಅವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಮುರುಗೇಶ್ ನಿರಾಣಿಯವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಬಳಿಕ ಆರ್.ಶಂಕರ್ ಅವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.  ಸಿ.ಪಿ.ಯೋಗೀಶ್ವರ್ ಅವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಎಸ್ ಅಂಗಾರ ಅವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *