Connect with us

Dvgsuddi Kannada | online news portal | Kannada news online

ಮುಖ್ಯಮಂತ್ರಿ ಪಟ್ಟಿಗೆ ರಾಜ್ಯಪಾಲರು ಅಂಕಿತ; ನೂತನ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ

ಪ್ರಮುಖ ಸುದ್ದಿ

ಮುಖ್ಯಮಂತ್ರಿ ಪಟ್ಟಿಗೆ ರಾಜ್ಯಪಾಲರು ಅಂಕಿತ; ನೂತನ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ

ಬೆಂಗಳೂರು: ಸಿಎಂ ಯಡಿಯೂರಪ್ಪ ನೂತನ 7  ಸಚಿವರಿಗೆ ಇಂದು ಖಾತೆ ಹಂಚಿಕೆ ಮಾಡಿದ್ದಾರೆ. ನಿನ್ನೆ ರಾತ್ರಿ ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿಯನ್ನು ಸಿಎಂ ರಾಜಭವನಕ್ಕೆ ಕಳುಹಿಸಿದ್ದರು. ಇಂದು ಆ  ಪಟ್ಟಿಗೆ ರಾರಾಜ್ಯಪಾಲರು ಅಂಕಿತ ಹಾಕಿದ್ದು, ಸಿಎಂ ಕಳುಹಿಸಿದ ಪಟ್ಟಿಯೇ ಅಂತಿಮವಾಗಿದೆ. ನೂತನ ಸಚಿವರ ಹೆಸರನ್ನು ಗೆಜೆಟ್  ಪ್ರಕಟಿಸಲಾಗಿದೆ.

ಏಕಾಏಕಿ ಕೆಲ ಸಚಿವರ ಖಾತೆಯನ್ನು ಕೂಡ ಬದಲಾವಣೆ ಮಾಡಿದ್ದಕ್ಕೆ ಕೆಲ ಹಿರಿಯ ಸಚಿವರು ಅಸಮಾಧಾನ ವ್ಯಕ್ತಪಡಿದ್ದರು. ಬಹಿರಂಗವಾಗಿ ಅಸಮಾಧನ ವ್ಯಕ್ತಪಡಿಸದಿದ್ದರೂ ಸಚಿವರಾದ ಮಾಧುಸ್ವಾಮಿ ಮತ್ತು ಸುಧಾಕರ್ ತಮ್ಮ ಆಪ್ತರ ಬಳಿ ಅಸಮಾಧಾನ ವ್ಯಕ್ತಪಡಿಸದ್ದರು. ಕೆಲ ಸಚಿವರ ಖಾತೆ ಅದಲು ಬದಲು ಮಾಡಿ, ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.

  • ಉಮೇಶ್ ಕತ್ತಿ – ಆಹಾರ ಮತ್ತು ನಾಗರಿಕ ಪೂರೈಕೆ
  • ಮುರುಗೇಶ್ ನಿರಾಣಿ-ಗಣಿ ಮತ್ತು ಭೂ ವಿಜ್ನಾನ
  • ಎಂಟಿಬಿ ನಾಗರಾಜ್-ಅಬಕಾರಿ ಇಲಾಖೆ
  • ಸಿ.ಪಿ.ಯೋಗೇಶ್ವರ್-ಸಣ್ಣ ನೀರಾವರಿ ಖಾತೆ
  • ಎಸ್.ಅಂಗಾರ- ಮೀನುಗಾರಿಕೆ ಮತ್ತು ಬಂದರು
  • ಸಿಸಿ ಪಾಟೀಲ್- ಸಣ್ಣ ಕೈಗಾರಿಕೆ, ವಾರ್ತಾ ಇಲಾಖೆ
  • ಅರವಿಂದ ಲಿಂಬಾವಳಿ-ಅರಣ್ಯ ಇಲಾಖೆ

ಇನ್ನು ಕೆಲ ಪ್ರಮುಖ ಸಚಿವರ ಖಾತೆಗಳನ್ನು ಬದಲಾವಣೆ ಮಾಡಲಾಗಿದೆ. ಜೆ.ಸಿ. ಮಾಧುಸ್ವಾಮಿ ಬಳಿಯಿದ್ದ ಕಾನೂನು ಮತ್ತು ಸಂಸದೀಯ ಖಾತೆಯನ್ನು ಹೆಚ್ಚುವರಿಯಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ವಹಿಸಲಾಗಿದೆ. ಡಾ.ಕೆ.ಸುಧಾಕರ್ ಬಳಿ ಇದ್ದ ವೈದ್ಯಕೀಯ ಶಿಕ್ಷಣ ಖಾತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಜೆ.ಸಿ. ಮಾಧುಸ್ವಾಮಿ ಅವರಿಗೆ ವಹಿಸಲಾಗಿದೆ. ಆನಂದ್ ಸಿಂಗ್ ಬಳಿಯಿದ್ದ ಅರಣ್ಯ ಇಲಾಖೆಯನ್ನು ಅರವಿಂದ ಲಿಂಬಾವಳಿಗೆ ನೀಡಲಾಗಿದ್ದು, ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ನೀಡಲಾಗಿದೆ.ಆರ್.ಶಂಕರ್ ಗೆ ಪೌರಾಡಳಿತ, ಗೋಪಾಲಯ್ಯ ಅವರಿಗೆ ತೋಟಗಾರಿಕೆ ಮತ್ತು ಸಕ್ಕರೆ ಹಾಗೂ ನಾರಾಯಣ ಗೌಡ ಯುವಜನ ಕ್ರೀಡೆ, ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});