Connect with us

Dvgsuddi Kannada | online news portal | Kannada news online

ರಮೇಶ್ ಜಾರಕಿಹೊಳಿ ಸಿಡಿ ಮಾಡಿಸಿದ್ದು ಕಾಂಗ್ರೆಸ್ ನವರೇ: ಸಚಿವ ಎಸ್.ಟಿ. ಸೋಮಶೇಖರ್

ಪ್ರಮುಖ ಸುದ್ದಿ

ರಮೇಶ್ ಜಾರಕಿಹೊಳಿ ಸಿಡಿ ಮಾಡಿಸಿದ್ದು ಕಾಂಗ್ರೆಸ್ ನವರೇ: ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಯಲು ಪ್ರಕರಣ ಸಂಬಂಧ ಸಚಿವ ಎಸ್.ಟಿ. ಸೋಮಶೇಖರ್ ಹೊಸ ಬಾಂಬ್ ಸಿಡಿಸಿದ್ದು, ಸಿಡಿ ಮಾಡಿಸಿದ್ದು ಕಾಂಗ್ರೆಸ್ ನವರೇ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ಯನ್ನು ಮಾಡಿದ್ದು ಕಾಂಗ್ರೆಸ್ ನವರೇ, ಮತ್ಯಾರು ಮಾಡ್ತಾರೆ.  ಇಂತಹ ಮನೆಹಾಳ್ ಕೆಲಸ ಮಾಡೋದು ಕಾಂಗ್ರೆಸ್ ನವರೇ ಎಂದು ಗಂಭೀರ ಆರೋಪಿಸಿದರು.  ನಾನು 20 ವರ್ಷ ಕಾಂಗ್ರೆಸ್ ಪಕ್ಷದಲ್ಲೇ ಇದ್ದವನು, ಅವರು ಏನು ಮಾಡುತ್ತಾರೆಂದು ನನಗೆ ಚೆನ್ನಾಗಿ ಗೊತ್ತಿದೆ. ಸಿಡಿ ಪ್ರಕರಣವನ್ನು ಸಿಬಿಐ ಗೆ ಕೊಡಲಿ ಎಂದು ಒತ್ತಾಯಿಸಿದ್ದೇನೆ ಎಂದರು.

ರಾಜಕೀಯವಾಗಿ ಸವಾಲು ಹಾಕಲಿ, ತಾಕತ್ತಿದ್ದರೆ ನನ್ನ ಹಾಗೂ ರಮೇಶ್ ಜಾರಕಿಹೊಳಿ ವಿರುದ್ಧ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಿಂದ ಅವರ ಮಾನ-ಮರ್ಯಾದೆ ಏನಾಯಿತು. ರಾಜಕೀಯ ಷಡ್ಯಂತ್ರದಿಂದ ಮಾನ ಹಾನಿಯಾಗಬಾರದು. ಹೀಗಾಗಿ ನಾವು ಆರು ಜನ ಸಚಿವರು ಕೋರ್ಟ್ ಗೆ ಮೊರೆ ಹೋಗಿದ್ದೇವೆ ಎಂದು ತಿಳಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top