Connect with us

Dvgsuddi Kannada | online news portal | Kannada news online

ನಟ ದರ್ಶನ್ ಸಂಭಾವನೆ ಪಡೆಯದೇ ಕೃಷಿ ಇಲಾಖೆ ರಾಯಭಾರಿಯಾಗಿರುವುದು ಹೆಮ್ಮೆಯ ವಿಚಾರ: ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ನಟ ದರ್ಶನ್ ಸಂಭಾವನೆ ಪಡೆಯದೇ ಕೃಷಿ ಇಲಾಖೆ ರಾಯಭಾರಿಯಾಗಿರುವುದು ಹೆಮ್ಮೆಯ ವಿಚಾರ: ಸಿಎಂ ಯಡಿಯೂರಪ್ಪ

ಬೆಂಗಳೂರು: ಖ್ಯಾತ ನಟ ದರ್ಶನ್ ನಟನೆಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಗೆ. ಇದರ ಜೊತೆ ಯಾವುದೇ ಸಂಭಾವನೆಯಿಲ್ಲದೇ ಕೃಷಿ ಇಲಾಖೆಯ ರಾಯಭಾರಿಯಾಗಿರುವುದು ಹೆಮ್ಮೆಯ ವಿಚಾರ‌ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೃಷಿ ವಿವಿ ಬೋಧಕ, ಬೋಧಕೇತರ ಹುದ್ದೆ ಭರ್ತಿಗೆ ಸರ್ಕಾರಕ್ಕೆ ಪ್ರಸ್ತಾವನೆ: ಬಿ.ಸಿ. ಪಾಟೀಲ್

ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ‌ಇದು ಕೃಷಿ ಇಲಾಖೆಯ ಅಭೂತಪೂರ್ವ ಕಾರ್ಯಕ್ರಮವಾಗಿದೆ. ಚಾಲೆಂಜಿಂಗ್ ಸ್ಟಾರ್ ಚಿತ್ರರಂಗದಲ್ಲಿ ನಟನೆಯ ಜೊತೆಗೆ ಕೃಷಿ ಪಶುಸಂಗೋಪನೆ ಚಟುವಟಿಕೆಗಳನ್ನೂ ನಡೆಸುತ್ತಿರುವ ದರ್ಶನ್ ಕೃಷಿ ಕಾಯಕದ ರಾಯಭಾರಿಯಾಗಿರುವುದು ಹೆಮ್ಮೆಯ ವಿಚಾರ ಎಂದರು.

ದರ್ಶನ್ ಎತ್ತರವಿರುವಷ್ಟು ಅವರ ಹೃದಯವೂ ಅಷ್ಟೇ ವಿಶಾಲವಾಗಿದೆ. ದರ್ಶನ್ ಫಾರ್ಮ್ ಎನ್ನುವುದು ಸಣ್ಣ ಮೃಗಾಲಯವಿದ್ದಂತೆ ಇದೆ. ದರ್ಶನ್ ಸ್ವತಃ ಕೃಷಿ ಚಟುವಟಿಕೆಯನ್ನೂ ಮಾಡುತ್ತಾರೆ. ದರ್ಶನ್ ಸ್ವತಃ ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ ಎಂದಿರುವುದು ಖುಷಿಯ ವಿಚಾರ. ದೊಡ್ಡದೊಡ್ಡ ಕೆಲ ಸೂಪರ್ ಸ್ಟಾರ್‌ಗಳು ಸಂಭಾವನೆ ಪಡೆದು ದೊಡ್ಡದೊಡ್ಡ ಕಂಪೆನಿ ಕಾರ್ಯಕ್ರಮಗಳಿಗೆ ರಾಯಭಾರಿಯಾಗುತ್ತಾರೆ. ಆದರೆ ದರ್ಶನ್ ಕೃಷಿ ಇಲಾಖೆಗೆ ಯಾವುದೇ ಸಂಭಾವನೆ ಪಡೆಯದೇ ರಾಯಭಾರಿಯಾಗಿರುವುದು ದರ್ಶನ್ ಅವರಲ್ಲಿರುವ ಕೃಷಿ ಉತ್ಸಾಹ ರೈತ ಪರ ಕಾಳಜಿಯನ್ನು ತೋರಿಸುತ್ತದೆ ಎಂದರು.

ದರ್ಶನ್ ಮಾತನಾಡಿ, ಪೊಲೀಸ್ ಇಲಾಖೆಯಿಂದ ಸಿನಿಮಾರಂಗದಿಂದ ಈಗ ಬಿ.ಸಿ.ಪಾಟೀಲ್ ಕೃಷಿ ಸಚಿವರಾಗಿದ್ದಾರೆ. ನಾನು ಸರ್ಕಾರದ ಕೃಷಿ ಇಲಾಖೆಯ ಕಾರ್ಯಕ್ರಮಗಳನ್ನು ಪ್ರಚುರ ಪಡಿಸುತ್ತೇನೆ. ನನಗೆ ರೈತರೊಂದಿಗೆ  ರಕ್ತ ಸಂಬಂಧ. ಹೀಗಾಗಿ ರೈತರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದರು

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top