ಉಡುಪಿ: ರಾಜ್ಯದ ಖಾಸಗಿ ಒಡೆತನದ ದೇವಸ್ಥಾನ, ಟ್ರಸ್ಟ್ ಗಳನ್ನು ಸ್ವಾಧೀನಪಡಿಸಿಕೊಳ್ಳುವ ಉದ್ದೇಶ ಕರ್ನಾಟಕ ಸರ್ಕಾರಕ್ಕಿಲ್ಲ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
2011ರ ಧಾರ್ಮಿಕ ದತ್ತಿ ಕಾಯ್ದೆ ಅಡಿಯಲ್ಲಿ ಖಾಸಗಿ ದೇವಸ್ಥಾನಗಳ ನೋಂದಣಿ ಮಾಡಿಕೊಳ್ಳುವ ಬಗ್ಗೆ ಉಲ್ಲೇಖಿಸಲಾಗಿದ್ದು, ದೇವಸ್ಥಾನಗಳನ್ನು ಸ್ವಾಧೀನಪಡಿಸಿಕೊಳ್ಳುತ್ತದೆ ಎಂಬ ವದಂತಿ ಹೆಚ್ಚಿದ ಹಿನ್ನೆಲೆ ಸಚಿವರು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
2015ರಲ್ಲಿ ಖಾಸಗಿ ಆಡಳಿತದಲ್ಲಿರುವ ದೇವಸ್ಥಾನಗಳ ನೋಂದಣಿಯನ್ನು ಕಡ್ಡಾಯಗೊಳಿಸಲಾಗಿದ್ದು, ಪ್ರತಿವರ್ಷ ಮರುನೋಂದಣಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಸೂಚನೆ ನೀಡಲಾಗಿತ್ತು. ಆದರೆ, ಗೊಂದಲ ನಿವಾರಿಸುವ ನಿಟ್ಟಿನಲ್ಲಿ ಪ್ರತಿವರ್ಷ ನೋಂದಣಿ ಬಗ್ಗೆ ಜ್ಞಾಪಿಸುವುದನ್ನು ತಡೆ ಹಿಡಿಯಲಾಗಿದೆ ಎಂದರು.



