ಚಂದ್ರಗುತ್ತಿ ಶ್ರೀ ರೇಣುಕಾಂಬ ಜಾತ್ರೆ; ಹೊರಗಿನ ಭಕ್ತರಿಗೆ ಪ್ರವೇಶ ನಿಷೇಧ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಶಿವಮೊಗ್ಗ: ಚಂದ್ರಗುತ್ತಿಯ ಶ್ರೀ ರೇಣುಕಾಂಬ ಜಾತ್ರಾ ಮಹೋತ್ಸವ ಕಾರ್ಯಗಳಲ್ಲಿ ಹೊರಗಿನ ಭಕ್ತರ ಪ್ರವೇಶಕ್ಕೆ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶಿಸಿದ್ದಾರೆ.

ಸರ್ಕಾರದ ಮಾರ್ಗಸೂಚಿ ಹಾಗೂ ಕೆಲವು ಷರತ್ತುಗಳನ್ನು ಅನುಸರಿಸಿ ಮಾರ್ಚ್ 24ರವರೆಗೆ ಜಾತ್ರೆ ಅಂಗವಾಗಿ ನಡೆಯುವ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ಸ್ಥಳೀಯರಿಂದ ನಿರ್ವಹಿಸಲು ಅವರು ಅನುಮತಿ ನೀಡಿದ್ದಾರೆ.

ಜಾತ್ರಾ ಪ್ರದೇಶದಲ್ಲಿ ರಸ್ತೆ ಬದಿಗಳಲ್ಲಿ ಯಾವುದೇ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ನಡೆಸಲು ಅವಕಾಶವಿರುವುದಿಲ್ಲ. ರಥೋತ್ಸವಕ್ಕೆ ಸಂಬಂಧಿಸಿದಂತೆ  ಗ್ರಾಮಕ್ಕೆ ಆಗಮಿಸುವ ಎಲ್ಲಾ ವಾಹನಗಳನ್ನು ನಿಗದಿಪಡಿಸಿದ ಚೆಕ್‌ಪೋಸ್ಟ್ ಗಳಲ್ಲಿ ತಡೆದು ಹಿಂದಕ್ಕೆ ಕಳುಹಿಸಬೇಕು. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಅಡಿ ಕ್ರಮ ಜರುಗಿಸಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *