Connect with us

Dvgsuddi Kannada | online news portal | Kannada news online

ವಾನಹ ನೋಂದಣಿ ಫಲಕದಲ್ಲಿ ನಿಯಮಬಾಹಿರವಾಗಿ ಇರುವ ಸಂಘ-ಸಂಸ್ಥೆಯ ಹೆಸರು, ಚಿಹ್ನೆ, ಲಾಂಛನ  ತೆರವಿಗೆ ಖಡಕ್ ಸೂಚನೆ   

ಪ್ರಮುಖ ಸುದ್ದಿ

ವಾನಹ ನೋಂದಣಿ ಫಲಕದಲ್ಲಿ ನಿಯಮಬಾಹಿರವಾಗಿ ಇರುವ ಸಂಘ-ಸಂಸ್ಥೆಯ ಹೆಸರು, ಚಿಹ್ನೆ, ಲಾಂಛನ  ತೆರವಿಗೆ ಖಡಕ್ ಸೂಚನೆ   

ಬೆಂಗಳೂರು: ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಹಾಗೂ ಇತರೆ ಸಂಸ್ಥೆಗಳು ಸೇರಿದಂತೆ ನಿಗಮ, ಮಂಡಳಿ, ಸಂಘ-ಸಂಸ್ಥೆ ಹೆಸರಲ್ಲಿ ಅನಧಿಕೃತ ಲಾಂಛನ ಅಳವಡಿಸಿದ ವಾಹನಗಳ ವಿರುದ್ಧ ತೀವ್ರ ಕಾರ್ಯಾಚರಣೆ ನಡೆಸುವಂತೆ ಸಾರಿಗೆ ಇಲಾಖೆ ತನ್ನ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಬಗ್ಗೆ ಮಾ. 16ರೊಳಗಾಗಿ ಸಂಬಂಧಿಸಿದಂತ ಮಾಹಿತಿಯನ್ನು ಸಲ್ಲಿಸಲು ಸೂಚಿಸಿದೆ.

ಹೈಕೋರ್ಟ್ ವಾಹನಗಳ ನೋಂದಣಿ ಫಲಕಗಳ ಮೇಲೆ ಯಾವುದೇ ಸಂಘ-ಸಂಸ್ಥೆಗಳ ಹೆಸರು, ಚಿನ್ನೆ, ಲಾಂಛನ ಹಾಕುವಂತಿಲ್ಲ ಎಂದು ತಿಳಿಸಿದ್ದರೂ, ಕೆಲವರು ಅನಧಿಕೃತ ಹೆಸರು, ಲಾಂಛನ ಹಾಕಿಕೊಂಡು ಓಡಾಡುತ್ತಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸುವಂತೆ ಆದೇಶಿಸಿದೆ.

ಈ ಬಗ್ಗೆ ರಾಜ್ಯದ ಎಲ್ಲಾ ವಿಭಾಗಗಳ ಜಂಟಿ ಸಾರಿಗೆ ಆಯುಕ್ತರಿಗೆ ಸಾರಿಗೆ ಇಲಾಖೇ ಸೂಚನೆ ನೀಡಿದ್ದು, ಅನಧಿಕೃತ ನಾಮಫಲಕ ತೆರವುಗೊಳಿಸಲು, ಉಚ್ಛ ನ್ಯಾಯಾಲಯವು ಕಾಲ ಕಾಲಕ್ಕೆ ಮಧ್ಯಂತರ ಆದೇಶಗಳನ್ನು ನೀಡುತ್ತಾ ಬಂದಿದೆ. ಆದರೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗಗಳ ಹೆಸರುಗಳನ್ನು ಹೋಲುವಂತ ರಾಷ್ಟ್ರೀಯ, ರಾಜ್ಯ ಮಾನವ ಹಕ್ಕುಗಳ ಒಕ್ಕೂಟ, ಸಂಸ್ಥೆ ಇತ್ಯಾದಿ ಹೆಸರುಗಳನ್ನು ಚಿಹ್ನೆ, ಲಾಂಛನಗಳನ್ನು ಹಾಗೂ ಸಂಘ-ಸಂಸ್ಥೆಗಳ ಹೆಸರು ಅಳವಡಿಸಿಕೊಂಡು ಓಡಾಡುತ್ತಿದ್ಧಾರೆ ಎಂದು ಎಚ್ಚರಿಕೆ ನೀಡಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top