Connect with us

Dvgsuddi Kannada | online news portal | Kannada news online

ಕರ್ನಾಟಕ ಬಂದ್ ಆಯ್ತು, ಈಗ ರೈಲ್ವೆ ಬಂದ್ ಗೆ ವಾಟಾಳ್ ನಾಗರಾಜ್ ಕರೆ

ಪ್ರಮುಖ ಸುದ್ದಿ

ಕರ್ನಾಟಕ ಬಂದ್ ಆಯ್ತು, ಈಗ ರೈಲ್ವೆ ಬಂದ್ ಗೆ ವಾಟಾಳ್ ನಾಗರಾಜ್ ಕರೆ

ಬೆಂಗಳೂರು : ಕನ್ನಡ ಒಕ್ಕೂಟದ ಅಧ್ಯಕ್ಷ  ಮತ್ತೊಂದು ಬಂದ್‌ಗೆ ಕರೆ ನೀಡಿದ್ದಾರೆ. ಈಗಾಗಲೇ ಕರ್ನಾಟಕ ಬಂದ್, ರೈತರ ಪ್ರತಿಭಟನೆ ರಾಜ್ಯದಲ್ಲಿ ನಡೆದಿದೆ. ಇದೀಗ ಜನವರಿ 9ಕ್ಕೆ ಮತ್ತೊಂದು ಬಂದ್ ಗೆ ಕನ್ನಡ ಚಳವಳಿ ಪಕ್ಷದ  ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ಕರ್ನಾಟಕ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ರಚನೆ ಮಾಡಿರುವುದನ್ನು ವಿರೋಧಿಸಿ ಜನವರಿ 9ರಂದು ರೈಲು ಬಂದ್ ನಡೆಯಲಿದೆ. ಮುಂಜಾನೆ 9 ಗಂಟೆಯಿಂದ ರಾತ್ರಿ 9 ಗಂಟೆ ತನಕ ರಾಜ್ಯದಲ್ಲಿ ರೈಲು ಬಂದ್ ಮಾಡಲಾಗುತ್ತದೆ. ರೈಲ್ವೆ ಸಂಚಾರ ಸಂಪೂರ್ಣ ಬಂದ್ ಮಾಡುತ್ತೇವೆ. ಈ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದರು.

ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಡಿಸೆಂಬರ್ 5ರಂದು ಕನ್ನಡ ಒಕ್ಕೂಟ ಕರ್ನಾಟಕ ಬಂದ್ ಕರೆ ನೀಡಲಾಗಿತ್ತು. ಈ ಬಂದ್ ವಿಫಲವಾಗಲು ಸರ್ಕಾರ ನೇರ ಕಾರಣ. ಬಂದ್ ವಿಫಲಗೊಳಿಸಲು ಸರ್ಕಾರ ಪಣ ತೊಟ್ಟಿತ್ತು. ಪೊಲೀಸರು ದಬ್ಬಾಳಿಕೆ ನಡೆಸಿದರು ಎಂದು ವಾಟಾಳ್ ನಾಗರಾಜ್ ಆರೋಪಿಸಿದರು.

ಇಲ್ಲಿರುವ ತಮಿಳರು, ಮಲಯಾಳಿಗಳು, ಗುಜರಾತಿಗಳು ಬಿಜೆಪಿಯ ಏಜೆಂಟ್‌ಗಳು. ಜನವರಿ 9ರಂದು ಕನ್ನಡ ಪರ ಸಂಘಟನೆಗಳ ಸದಸ್ಯರು ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತೇವೆ ಎಂದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});