Connect with us

Dvgsuddi Kannada | online news portal | Kannada news online

ಫೆ. 13ರ ಬಳಿಕ ರಾಜ್ಯದಲ್ಲಿ ಚಳಿ ಇಳಿಕೆ: ಹವಾಮಾನ ಇಲಾಖೆ ಮಾಹಿತಿ

ಪ್ರಮುಖ ಸುದ್ದಿ

ಫೆ. 13ರ ಬಳಿಕ ರಾಜ್ಯದಲ್ಲಿ ಚಳಿ ಇಳಿಕೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು:  ರಾಜ್ಯದಲ್ಲಿ ಚಳಿಯ ವಾತಾವರಣ ಮುಂದುವರೆದಿದ್ದು,  ಫೆ.13ರ ಬಳಿಕ ಚಳಿ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.  ಉತ್ತರ ಒಳನಾಡು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಕಡಿಮೆಯಾಗುತ್ತಿದ್ದು, ಒಣಹವೆ ವಾತಾವರಣ ಮುಂದುವರೆದಿದೆ.

ರಾಜ್ಯಾದ್ಯಂತ ಫೆ.13ರವರೆಗೂ ಹಗಲು ಒಣಹವೆ ಹಾಗೂ ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ ಸ್ವಲ್ಪ ಚಳಿ ಮುಂದುವರೆಯಲಿದೆ. ಫೆ.13ರ ಬಳಿಕ ಉತ್ತರ ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ವಾಡಿಕೆ ಪ್ರಮಾಣದ ತಾಪಮಾನ ದಾಖಲಾಗಲಿದೆ. ಈಗಿರುವ ಚಳಿ ದೂರವಾಗಲಿದೆ.

ಬೀದರ್‌ ನಲ್ಲಿ ರಾಜ್ಯದ ಕನಿಷ್ಠ ಉಷ್ಣಾಂಶ 7.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದರಿಂದ ಆ ಜಿಲ್ಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ ಸ್ವಲ್ಪ ಚಳಿಯ ವಾತಾವರಣವಿರಲಿದೆ. ಹಾಸನದಲ್ಲಿ 10.4 ಡಿಗ್ರಿ ಸೆಲ್ಸಿಯಸ್, ಧಾರವಾಡ 11, ವಿಜಯಪುರ 11.5, ಹಾವೇರಿ 13, ಗದಗ 13.6 ಡಿಗ್ರಿ ಸೆಲ್ಸಿಯಸ್, ಬೆಳಗಾವಿಯಲ್ಲಿ 13.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top