ಅ.27 ರಂದು ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಪರೀಕ್ಷೆ; ಅಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸಿ-ಕಂದಾಯ ಸಚಿವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ 1000 ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 27ರ ಭಾನುವಾರ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸಲು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಆಯಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಚಿವರು, ರಾಜ್ಯಾದ್ಯಂತ 4.71 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಬಿಗಿ ಭದ್ರತೆ ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಮೀಸಲು ಪೊಲೀಸರನ್ನು ಕೂಡ ಬಳಸಿಕೊಳ್ಳಬೇಕು. ಪರೀಕ್ಷಾ ಅಕ್ರಮ ಮತ್ತು ಗೊಂದಲಕ್ಕೆ ಅವಕಾಶ ನೀಡಬಾರದು ಸೂಚನೆಕೊಟ್ಟರು.

ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆದಿರುವುದು ಕಂಡು ಬಂದಿದೆ. ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಇಡೀ ವ್ಯವಸ್ಥೆಯೇ ತಲೆತಗ್ಗಿಸುವಂತಹ ಕೃತ್ಯವಾಗಿದೆ. ಇಂತಹ ಕ್ರಮಗಳು ಮರುಕಳಿಸಬಾರದು. ಕಲಬುರಗಿ, ಯಾದಗಿರಿ, ವಿಜಯಪುರ ಜಿಲ್ಲೆಗಳನ್ನು ಸೂಕ್ಷ್ಮ ಜಿಲ್ಲೆಗಳೆಂದು ಗುರುತಿಸಲಾಗಿದ್ದು, ಈ ಭಾಗದ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಬೇಕು. ಪ್ರಶ್ನೆ ಪತ್ರಿಕೆಗಳು ಜಿಲ್ಲಾ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸಾಗುವ ಮಾರ್ಗ ಮಧ್ಯೆ ಸೋರಿಕೆಯಾದ ಹಲವು ಪ್ರಕರಣಗಳಿದ್ದು, ಈ ಬಗ್ಗೆಯೂ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *