Connect with us

Dvgsuddi Kannada | online news portal | Kannada news online

ರಾಜ್ಯ ಬಜೆಟ್ 2022: ರೈತರಿಗೆ ಆರ್ಥಿಕ ಪುನಶ್ಚೇತನ ನೀಡಲು ಸಹಕಾರಿ- ತೋಟಗಾರಿಕೆ ವಿಜ್ಞಾನಿ ಬಸವನಗೌಡ ಎಂ. ಜಿ

ದಾವಣಗೆರೆ

ರಾಜ್ಯ ಬಜೆಟ್ 2022: ರೈತರಿಗೆ ಆರ್ಥಿಕ ಪುನಶ್ಚೇತನ ನೀಡಲು ಸಹಕಾರಿ- ತೋಟಗಾರಿಕೆ ವಿಜ್ಞಾನಿ ಬಸವನಗೌಡ ಎಂ. ಜಿ

 ದಾವಣಗೆರೆ: ಕೃಷಿ ಕ್ಷೇತ್ರದಲ್ಲಿ ರೈತ ಶಕ್ತಿ ಯೋಜನೆ,  ನೈಸರ್ಗಿಕ ಕೃಷಿ ಉತ್ತೇಜನೆ,  ಸಾವಯವ ಕೃಷಿ ಯೋಜನೆ, ಸೆಕೆಂಡರಿ ಕೃಷಿ ನಿರ್ದೇಶನಾಲಯ ಸ್ಥಾಪನೆ, ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್, ಮೆಣಸು ಮತ್ತು ಮಾವಿನ ಸಂಸ್ಕರಣಾ ಘಟಕ, ಮೆಕ್ಕೆಜೋಳ ಸಂಶೋಧನಾ ಕೇಂದ್ರ, ಕೊಯ್ಲೋತ್ತರ ನಂತರದ ತಾಂತ್ರಿಕತೆಗೆ ಉತ್ತೇಜನ ಈ ಬಾರಿಯ ಬಜೆಟಿನ ಕೃಷಿ ಕ್ಷೇತ್ರದ ಪ್ರಮುಖ ಕೊಡುಗೆಗಳು.

ಪಶುಸಂಗೋಪನೆ ಹಾಗೂ ಮೀನುಗಾರಿಕೆ ಕ್ಷೇತ್ರಕ್ಕೆ ಉತ್ತಮ ನೆರವು ಹಾಗೂ ಕೃಷಿ ಸಮೃದ್ಧಿ ಸಹಕಾರಿ ಬ್ಯಾಂಕ್ ಮತ್ತು ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಯಿಂದ ರೈತರಿಗೆ ಆರ್ಥಿಕ ಪುನಶ್ಚೇತನ ನೀಡಲು ಸಹಕಾರಿಯಾಗಲಿದೆ ಎಂದು ದಾವಣಗೆರೆಯ ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಬಸವನಗೌಡ ಎಂ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ವನ್ನು ಬಿಟ್ಟರೆ, ಕೃಷಿ ಮತ್ತು ತೋಟಗಾರಿಕೆ ಕಾಲೇಜು ಸ್ಥಾಪನೆಯ  ಕನಸು ಈಡೇರಲಿಲ್ಲ. ಜೊತೆಗೆ ಅಡಿಕೆ ಬೆಳೆಯ ಬೆಲೆಯನ್ನು ಸ್ಥಿರವಾಗಿ ರಿಸಲು ಜಿಲ್ಲೆಯಲ್ಲಿ ಅಡಿಕೆ ಬೆಳೆಯ ಉಪ ಉತ್ಪನ್ನಗಳು ಮತ್ತು ಸಂಸ್ಕರಣಾ ಘಟಕದ ಸ್ಥಾಪನೆಯ ಬೇಡಿಕೆ ಈಡೇರಿಲ್ಲ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top