ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಜು.07) 2023-24 ರ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿದರು. ಕಲ್ಯಾಣ ರಾಜ್ಯದ ಕನಸಿನ ಬಜೆಟ್ ಅನ್ನು ಮಂಡಿಸಿರುತ್ತಿರುವುದಾಗಿ ಹೇಳಿದ ಅವರು, 2022-23ರ ಅಂತ್ಯಕ್ಕೆ ಬಾಕಿ ಉಳಿಸಿರುವ ಕಾಮಗಾರಿಗಳ ಒಟ್ಟು ಮೊತ್ತವು 2,55,102 ಕೋಟಿ ರೂ.ಗಳಾಗಿದ್ದು, ಪೂರ್ಣಗೊಳಿಸಲು ಕನಿಷ್ಟ ಆರು ವರ್ಷಗಳು ಬೇಕಾಗಿದ್ದು, ನಮ್ಮ ಸರ್ಕಾರಕ್ಕೆ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಈ ಹಿಂದಿನ ಸರ್ಕಾರವನ್ನು ಟೀಕಿಸಿದರು.ರಾಜ್ಯದ ಅರ್ಥವ್ಯವಸ್ಥೆಯು ಹಿಂದಿನ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿರುತ್ತದೆ. ಕೋವಿಡ್ನಿಂದ ತತ್ತರಿಸಿದ ರಾಜ್ಯದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಈ ಹಿಂದಿದ್ದ ಸರ್ಕಾರವು ವಿಫಲವಾಗಿದೆ ಎಂದು ದೂರಿದರು.
ಈ ಬಜೆಟ್ನ ಗಾತ್ರ ಬಜೆಟ್ ಗಾತ್ರ 3 ಲಕ್ಷದ 27 ಸಾವಿರ ಕೋಟಿ ರೂ ಆಗಿದೆ. ಇನ್ನು ಈ ಬಜೆಟ್ನಲ್ಲಿ ವಿವಿಧ ಕ್ಷೇತ್ರಗಳಿಗೆ ಎಷ್ಟು ಅನುದಾನ ಹಂಚಿಕೆ ಮಾಡಲಾಗಿದೆ. ಅನುದಾನ ಇಲಾಖೆವಾರು ಹಂಚಿಕೆ ಮತ್ತು ಆದಾಯದ ವಿವರ ಇಲ್ಲಿದೆ.
- ಅನಯದಾನ ಹಂಚಿಕೆ
- ಶಿಕ್ಷಣ ಇಲಾಖೆ : 37597 ಕೋಟಿ ರೂ.
- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 24166 ಕೋಟಿ ರೂ.
- ಇಂಧನ ಇಲಾಖೆ 22.773 ಕೋಟಿ ರೂ
- ನಗರಾಭಿವೃದ್ಧಿ ಮತ್ತು ನೀರಾವರಿ ಇಲಾಖೆ: 19.44 ಕೋಟಿ ರೂ
- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ: 18 .38 ಕೋಟಿ ವೆಚ್ಚ
- ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 16. 638 ಕೋಟಿ ರೂ.ವೆಚ್ಚ
- ಕಂದಾಯ ಇಲಾಖೆಗೆ: 16167 ಕೋಟಿ ರೂ. ಅನುದಾನ ಹಂಚಿಕೆ
- ಆರೋಗ್ಯ ಮತ್ತು ಕುಟುಂಬ ಇಲಾಖೆಗೆ 14 950 ಕೋಟಿ ರೂ.ವೆಚ್ಚ
- ಸಮಾಜ ಕಲ್ಯಾಣ ಇಲಾಖೆ: 11.173 ಕೋಟಿ ರೂ.
- ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ: 10460 ಕೋಟಿ ರೂ.
- ಲೋಕೋಪಯೋಗಿ ಇಲಾಖೆಗೆ: 10143 ಕೋಟಿ ರೂ.
- ಕೃಷಿ ಮತ್ತು ತೋಟಗಾರಿಕೆ ಇಲಾಖೆ: 5 860 ಕೋಟಿ ರೂ.
- ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ 324 ಕೋಟಿ ರೂ.
ಆದಾಯದ ಸಂಗ್ರಹ
-
ವಾಣಿಜ್ಯ ತೆರಿಗೆಗಳಿಂದ (ಜಿಎಸ್ಟಿ ಸೇರಿ) 1.1000 ಕೋಟಿ ಆದಾಯ ನಿರೀಕ್ಷೆ
-
ಅಬಕಾರಿ ಇಲಾಖೆಯಿಂದ 36.000 ಕೋಟಿ ರೂ
- ನೋಂದಾಣಿ ಮತ್ತು ಮುದ್ರಾಂಕ ಇಲಾಖೆಯಿಂದ 25000 ಕೋಟಿ ರೂ
- ಮೋಟಾರು ವಾಹನ ತೆರಿಗೆಗಳಿಂದ 11.500 ಕೋಟಿ ರೂ
- ಇತರೆ ತೆರಿಗೆಯಿಂದ 2153 ಕೋಟಿ ರೂ
- ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ 9.000 ಕೋಟಿ,
ಒಟ್ಟು 2,38,410 ಕೋಟಿ ರೂ ರಾಜಸ್ವ ಜಮೆ. ಸ್ವಂತ ತೆರಿಗೆ, ಜಿಎಸ್ಟಿ ಪರಿಹಾರ ಎಲ್ಲವನ್ನು ಒಳಗೊಂಡಂತೆ 1.75,653 ಕೋಟಿ ಸಂಗ್ರಹ. ತೆರಿಗೆಯೇತರ ರಾಜಸ್ವಗಳಿಂದ ಸಂಗ್ರಹ 12.500 ಕೋಟಿ ರೂ. ಆಗಿದೆ.