Connect with us

Dvgsuddi Kannada | online news portal | Kannada news online

ದ್ವಿತೀಯ ಪಿಯುಸಿ ಫಲಿತಾಂಶ; ಮರು ಮೌಲ್ಯಮಾಪನ, ಸ್ಕ್ಯಾನ್ ಪ್ರತಿಗೆ ಅರ್ಜಿ ಸಲ್ಲಿಸುವುದು ಹೇಗೆ..? ಕೊನೆ ದಿನಾಂಕ, ಅರ್ಜಿ ಶುಲ್ಕದ ಮಾಹಿತಿ ಇಲ್ಲಿದೆ…

IMG 20240410 160629

ಪ್ರಮುಖ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ; ಮರು ಮೌಲ್ಯಮಾಪನ, ಸ್ಕ್ಯಾನ್ ಪ್ರತಿಗೆ ಅರ್ಜಿ ಸಲ್ಲಿಸುವುದು ಹೇಗೆ..? ಕೊನೆ ದಿನಾಂಕ, ಅರ್ಜಿ ಶುಲ್ಕದ ಮಾಹಿತಿ ಇಲ್ಲಿದೆ…

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ‌ಇಂದಿ (ಏ.10) ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದು, ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ವಿದ್ಯಾರ್ಥಿಗಳಿಗೆ ತಮಗೆ ಬರಬೇಕಾದ ಅಂಕ ಬಂದಿಲ್ಲ, ಸಂದೇಹ ಅಥವಾ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್​​ ಪ್ರತಿಗಾಗಿ, ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಏಪ್ರಿಲ್​ 16ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ಸ್ಕ್ಯಾನ್ಡ್​​ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಳ್ಳಲು ಏಪ್ರಿಲ್​ 19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್​ 14 ರಿಂದ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ದ್ವೀತಿಯ ಪಿಯುಸಿ ಪರೀಕ್ಷೆ 1ರ ವಿದ್ಯಾರ್ಥಿಗಳ ಫಲಿತಾಂಶ ಪ್ರತಿಯನ್ನು ಕೆಎಸ್​ಇಬಿಯು ಈಗಾಗಲೆ ಆಯಾ ಕಾಲೇಜು ಮಂಡಳಿಗಳಿಗೆ ಕಳುಹಿಸಿದೆ. ಇನ್ನು ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವವರು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಮರು ಮೌಲ್ಯಮಾಪನದ ಮತ್ತು ಮರು ಎಣಿಕೆಯ ಫಲಿತಾಂಶವನ್ನು ಮಂಡಳಿಯು, kseab.karnataka.gov.inಎಂಬ ವೆಬ್​ಸೈಟ್​ನಲ್ಲಿ ಪ್ರಕಟಿಸಲಿದೆ.

ಮರುಮೌಲ್ಯಮಾಪನ 2024 ಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? : ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು,ಅಧಿಕೃತ ವೆಬ್‌ಸೈಟ್ kseab.karnataka.gov.in ಗೆ ಭೇಟಿ ನೀಡಬೇಕು. ಫಾರ್ಮ್ ಜೊತೆಗೆ ಅರ್ಜಿ ಶುಲ್ಕವನ್ನು ಸಲ್ಲಿಸಿ ಸ್ವೀಕೃತಿ ಫಾರ್ಮ್ ಡೌನ್‌ಲೋಡ್ ಮಾಡಿ. ಸ್ಕ್ಯಾನ್ ಮಾಡಿದ ಪ್ರತಿಗಳಿಗೆ ಅರ್ಜಿ ಸಲ್ಲಿಸಿದ ನಂತರ, ಅಭ್ಯರ್ಥಿಗಳು ತಮ್ಮ ಸ್ಕ್ಯಾನ್ ಮಾಡಿದ ಉತ್ತರ ಪತ್ರಿಕೆಗಳ ಪಿಡಿಎಫ್ ಮೂಲಕ ನೀಡಲಿದೆ. ನಂತರ ಅವರು ಮರುಪರಿಶೀಲಿಸಲು ಬಯಸುವ ಉತ್ತರಗಳನ್ನು ಮತ್ತೆ ಅರ್ಜಿ ಸಲ್ಲಿಸಬಹುದು. ಪ್ರತಿ ವಿಷಯದ ಸ್ಕ್ಯಾನ್​ ಮಾಡಿದ ಪ್ರತಿಗೆ 530ರೂ. ನಿಗದಿಪಡಿಸಲಾಗಿದೆ. ಪ್ರತಿ ವಿಷಯದ ಮರು ಮೌಲ್ಯಮಾಪನಕ್ಕೆ 1,670 ರೂ. ನಿಗದಿ ಮಾಡಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top