Connect with us

Dvgsuddi Kannada | online news portal | Kannada news online

7ನೇ ವೇತನ ಆಯೋಗ ಜಾರಿ ಬಗ್ಗೆ ಸಿಎಂ‌‌‌‌ ಸಿದ್ದರಾಮಯ್ಯ ಮಹತ್ವದ ಹೇಳಿಕೆ

n5748018381705457697031fa8e97bba6fd7f07fda14ed4e79ec50f9ef04f980f3515916956734e059f9196

ಪ್ರಮುಖ ಸುದ್ದಿ

7ನೇ ವೇತನ ಆಯೋಗ ಜಾರಿ ಬಗ್ಗೆ ಸಿಎಂ‌‌‌‌ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬೆಂಗಳೂರು; ರಾಜ್ಯ ಸರ್ಕಾರಿ ನೌಕರರ 7ನೇ ವೇತನ ಆಯೋಗ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದು, ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.‌ ಷಡಕ್ಷರಿ ಅವರ ನೇತೃತ್ವದ ನಿಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ 7ನೇ ವೇತನ ಆಯೋಗ ಜಾರಿ ಬಗ್ಗೆ ಮನವಿ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಆಯೋಗ ವರದಿ ಸಲ್ಲಿಸಲು ಮಾರ್ಚ್‌ ವರೆಗೆ ಕಾಲಾವಧಿ ವಿಸ್ತರಣೆಯಾಗಿದ್ದು, ಚುನಾವಣೆ ನೀತಿ ಸಂಹಿತೆ ಘೋಷಣೆಯಾಗುವ ಮೋದಲೇ ವೇತನ ಪರಿಷ್ಕರಣೆ ಮಾಡಿ ಘೋಷಣೆ ಮಾಡುವಂತೆ ಮನವಿ ಸಲ್ಲಿಸಿದರು.

ಹೊಸ ಪಿಂಚಣಿ ಯೋಜನೆಯ ವ್ಯಾಪ್ತಿಯಲ್ಲಿದ್ದ 11,366 ಜನರಿಗೆ ಹಳೆ ಪಿಂಚಣಿ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. ಉಳಿದವರನ್ನೂ ಹಳೆ ಪಿಂಚಣಿ ಯೋಜನೆಗೆ ವ್ಯಾಪ್ತಿಗೆ ಸೇರಿಸಬೇಕು. ತೀವ್ರತರವಾದ 7 ಕಾಯಿಲೆಗಳಿಗೆ ಚಿಕಿತ್ಸೆ ಒದಗಿಸುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಗೆ ಚಾಲನೆ ನೀಡಲಾಗಿತ್ತು. ಸರ್ಕಾರಿ ನೌಕರರ ಕುಟುಂಬದವರಿಗೆ ಉಚಿತ ಆರೋಗ್ಯ ಯೋಜನೆಯನ್ನು ಅನುಷ್ಠಾನ ಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಮನವಿ ಮಾಡಿದರು.

ಮಂಗಳವಾರ ಮಧ್ಯಾಹ್ನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ 7ನೇ ರಾಜ್ಯ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸಂಘವು ರೂಪಿಸಿರುವ ಕಾರ್ಯಕ್ರಮದ ಪ್ರಗತಿ ಬಗ್ಗೆ ಚರ್ಚಿಸಲು ಸಿ. ಎಸ್. ಷಡಾಕ್ಷರಿ ಅಧ್ಯಕ್ಷತೆಯಲ್ಲಿ ಜಿಲ್ಲಾಧ್ಯಕ್ಷರುಗಳ ಸಭೆ ನಡೆಯಿತು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top